8:36 AM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಲಕ್ಷ್ಮಣ ಸವದಿ ಬಿಜೆಪಿಗೆ ಮೋಸ ಮಾಡಿ ಹೋಗಿದ್ದಾರೆ, ಪಕ್ಷ ಈಗ ಸ್ವಚ್ಛವಾಗಿದೆ: ರಮೇಶ್ ಜಾರಕಿಹೊಳಿ

22/04/2023, 20:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅವರು ಬಿಟ್ಟು ಹೋಗಿದ್ದರಿಂದ ಈಗ ಪಕ್ಷ ಸ್ವಚ್ಛವಾಗಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದರು.
ಅಥಣಿ ಪಟ್ಟಣದಲ್ಲಿ ಶನಿವಾರ ನಡೆದ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಬುಟಾಳಿ ಹಾಗೂ ಕನ್ನಡ ಪರ ಹೋರಾಟಗಾರ ರವಿ ಪೂಜಾರಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸವದಿ ಬಹಳಷ್ಟು ನಾಯಕರಿಗೆ ಮೋಸ ಮಾಡಿದ್ದಾರೆ.

ಬಿ.ಎಲ್.ಪಾಟೀಲ್, ಲೀಲಾವತಿ ಆರ್.ಪ್ರಸಾದ್, ಸಂತೋಷ್, ದಿ.ಉಮೇಶ್ ಕತ್ತಿ ಅವರಿಗೆ ಮೋಸ ಮಾಡಿ ಸುಮ್ಮನೆ ಅಳುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹರಿಹಾಯ್ದರು.


ಮಹೇಶ್ ಕುಮಠಳ್ಳಿ ಹಾಗೂ ನನಗೆ ಮೋಸ ಆಗಿದೆ. ನಾವು ಪಕ್ಷ ನಿಷ್ಠೆಯಿಂದ ಪಕ್ಷದಲ್ಲಿದ್ದೇವೆ. ಆದರೆ ಲಕ್ಷ್ಮಣ ಸವದಿ ಎಲ್ಲ ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಮತದಾರರು ಅವರನ್ನು ನೀವು ನಂಬಬೇಡಿ. ನೀವು ಅವರಿಗೆ ದಯವಿಟ್ಟು ಬುದ್ದಿ ಕಲಿಸಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು