7:50 AM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಲಕ್ಷ್ಮಣ ಸವದಿ ಬಿಜೆಪಿಗೆ ಮೋಸ ಮಾಡಿ ಹೋಗಿದ್ದಾರೆ, ಪಕ್ಷ ಈಗ ಸ್ವಚ್ಛವಾಗಿದೆ: ರಮೇಶ್ ಜಾರಕಿಹೊಳಿ

22/04/2023, 20:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅವರು ಬಿಟ್ಟು ಹೋಗಿದ್ದರಿಂದ ಈಗ ಪಕ್ಷ ಸ್ವಚ್ಛವಾಗಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದರು.
ಅಥಣಿ ಪಟ್ಟಣದಲ್ಲಿ ಶನಿವಾರ ನಡೆದ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಬುಟಾಳಿ ಹಾಗೂ ಕನ್ನಡ ಪರ ಹೋರಾಟಗಾರ ರವಿ ಪೂಜಾರಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸವದಿ ಬಹಳಷ್ಟು ನಾಯಕರಿಗೆ ಮೋಸ ಮಾಡಿದ್ದಾರೆ.

ಬಿ.ಎಲ್.ಪಾಟೀಲ್, ಲೀಲಾವತಿ ಆರ್.ಪ್ರಸಾದ್, ಸಂತೋಷ್, ದಿ.ಉಮೇಶ್ ಕತ್ತಿ ಅವರಿಗೆ ಮೋಸ ಮಾಡಿ ಸುಮ್ಮನೆ ಅಳುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹರಿಹಾಯ್ದರು.


ಮಹೇಶ್ ಕುಮಠಳ್ಳಿ ಹಾಗೂ ನನಗೆ ಮೋಸ ಆಗಿದೆ. ನಾವು ಪಕ್ಷ ನಿಷ್ಠೆಯಿಂದ ಪಕ್ಷದಲ್ಲಿದ್ದೇವೆ. ಆದರೆ ಲಕ್ಷ್ಮಣ ಸವದಿ ಎಲ್ಲ ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಮತದಾರರು ಅವರನ್ನು ನೀವು ನಂಬಬೇಡಿ. ನೀವು ಅವರಿಗೆ ದಯವಿಟ್ಟು ಬುದ್ದಿ ಕಲಿಸಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು