1:38 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಲಕ್ಷ್ಮಣ ಸವದಿ ಬಿಜೆಪಿಗೆ ಮೋಸ ಮಾಡಿ ಹೋಗಿದ್ದಾರೆ, ಪಕ್ಷ ಈಗ ಸ್ವಚ್ಛವಾಗಿದೆ: ರಮೇಶ್ ಜಾರಕಿಹೊಳಿ

22/04/2023, 20:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಬಿಜೆಪಿ ಪಕ್ಷಕ್ಕೆ ಮೋಸ ಮಾಡಿ ಹೋಗಿದ್ದಾರೆ. ಅವರು ಬಿಟ್ಟು ಹೋಗಿದ್ದರಿಂದ ಈಗ ಪಕ್ಷ ಸ್ವಚ್ಛವಾಗಿದೆ ಎಂದು ಬಿಜೆಪಿ ನಾಯಕ ರಮೇಶ್ ಜಾರಕಿಹೊಳಿ ಹೇಳಿದರು.
ಅಥಣಿ ಪಟ್ಟಣದಲ್ಲಿ ಶನಿವಾರ ನಡೆದ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಬುಟಾಳಿ ಹಾಗೂ ಕನ್ನಡ ಪರ ಹೋರಾಟಗಾರ ರವಿ ಪೂಜಾರಿ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸವದಿ ಬಹಳಷ್ಟು ನಾಯಕರಿಗೆ ಮೋಸ ಮಾಡಿದ್ದಾರೆ.

ಬಿ.ಎಲ್.ಪಾಟೀಲ್, ಲೀಲಾವತಿ ಆರ್.ಪ್ರಸಾದ್, ಸಂತೋಷ್, ದಿ.ಉಮೇಶ್ ಕತ್ತಿ ಅವರಿಗೆ ಮೋಸ ಮಾಡಿ ಸುಮ್ಮನೆ ಅಳುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹರಿಹಾಯ್ದರು.


ಮಹೇಶ್ ಕುಮಠಳ್ಳಿ ಹಾಗೂ ನನಗೆ ಮೋಸ ಆಗಿದೆ. ನಾವು ಪಕ್ಷ ನಿಷ್ಠೆಯಿಂದ ಪಕ್ಷದಲ್ಲಿದ್ದೇವೆ. ಆದರೆ ಲಕ್ಷ್ಮಣ ಸವದಿ ಎಲ್ಲ ಅಧಿಕಾರ ಅನುಭವಿಸಿ ಪಕ್ಷ ಬಿಟ್ಟು ಹೋಗಿದ್ದಾರೆ. ಮತದಾರರು ಅವರನ್ನು ನೀವು ನಂಬಬೇಡಿ. ನೀವು ಅವರಿಗೆ ದಯವಿಟ್ಟು ಬುದ್ದಿ ಕಲಿಸಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು