2:37 PM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಹೆಣ್ಣು ಮಗು ಕರುಣಿಸಿದ ಖುಷಿ: ಕಟೀಲಪ್ಪೆಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪಟ್ಟೆಸೀರೆ ಸಮರ್ಪಣೆ

22/04/2023, 23:42

ಕಟೀಲು(reporterkarnataka.com): ಬಯಕೆ ಈಡೇರಿದೆ. ಆಕೆ ಅಂದುಕೊಂಡಂತೆ ಹೆಣ್ಣು ಮಗು ಹುಟ್ಡಿದೆ. ತಾಯಿ ಫುಲ್ ಖುಷಿಗೊಂಡಿದ್ದಾರೆ. ತಾನು ಹೊತ್ತ ಹರಕೆಯಂತೆ ಕರಾವಳಿಯ ಪವಿತ್ರ ಕ್ಷೇತ್ರಗಳಲ್ಲಿ ಒಂದಾದ ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಿಗೆ ಬಂದ ಆ ಮಹಾ ತಾಯಿ ಹರಕೆಯೊಪ್ಪಿಸಿದ್ದಾರೆ.
ಈ ಮಹಾ ತಾಯಿ ಬೇರೆ ಯಾರೂ ಅಲ್ಲ, ತುಳುನಾಡು ಮೂಲದ ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು. ಹೆಣ್ಣು ಮಗುವಿಗಾಗಿ ಹರಕೆ ಹೊತ್ತಿದ್ದ ಶಿಲ್ಪಾ ಶೆಟ್ಟಿ ಹೆಣ್ಣು ಮಗು ಜನಿಸಿದರೆ ಕಟೀಲು ದುರ್ಗಾ ಪರಮೇಶ್ವರಿಗೆ ಪಟ್ಟೆ ಸೀರೆಯನ್ನು ಕಾಣಿಕೆ ರೂಪದಲ್ಲಿ ನೀಡೋದಾಗಿ ಹರಕೆ ಹೊತ್ತಿದ್ದರಂತೆ. ಅದೇ ರೀತಿ ಇಂದು ಬಂದು ತಮ್ಮ ಹರಕೆಯನ್ನು ತೀರಿಸಿದ್ದಾರೆ.
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಶಿಲ್ಪಾ ಶೆಟ್ಟಿ ಅವರು ಪತಿ ರಾಜ್ ಕುಂದ್ರಾ. ಮಕ್ಕಳಾದ ವಿಯಾನ್, ಸಮಿಷಾ, ಸಹೋದರಿ ನಟಿ ಶಮಿತಾ ಶೆಟ್ಟಿ. ಶಿಲ್ಪಾ ಶೆಟ್ಟಿಯವರ ತಾಯಿ ಭೇಟಿ ನೀಡಿ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೊಕ್ತೇಸರ ವಾಸುದೇವ ಆಸ್ರಣ್ಣ ಪ್ರಸಾದ ನೀಡಿದರು. ಅರ್ಚಕರಾದ ಅನಂತ ಆಸ್ರಣ್ಣ ಶ್ರೀಹರಿ ಆಸ್ರಣ್ಣ ವಕೀಲ ರವಿ ಪೂಜಾರಿ ಉಪಸ್ಥಿತರಿದ್ದರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೇಗುಲದ ನಾಗಸ್ವರ ವಾದಕರಾದ ಲಿಂಗಪ್ಪ ಸೇರಿಗಾರರ ವಾದ್ಯವಾದನವನ್ನು ಆಲಿಸಿದ ಶಿಲ್ಪಾ ಶೆಟ್ಟಿ ಹಾಗೂ ಶಮಿತಾ ಶೆಟ್ಟಿ ಕಟೀಲು ರಥಬೀದಿಯಲ್ಲಿ ನಡೆಯುತ್ತಿದ್ದ ಯಕ್ಷಗಾನವನ್ನು ಕೆಲಹೊತ್ತು ವೀಕ್ಷಿಸಿ, ವೇಷಗಳ ಪೋಟೋ ತೆಗೆದು ಸಂಭ್ರಮಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು