11:04 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

24ನೇ ದೇರೆಬೈಲ್ ವಾರ್ಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲೋಬೊ ಬಿರುಸಿನ ಪ್ರಚಾರ: ಮನೆ ಮನೆ ಭೇಟಿ

23/04/2023, 12:02

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ . ಲೋಬೊ ಅವರು ನಗರದ 24ನೇ ದೇರೆಬೈಲ್ ವಾರ್ಡಿನಲ್ಲಿ ಬಿರುಸಿನ ಪ್ರಚಾರ ಆರಂಭಿಸಿದರು. ವಾರ್ಡಿನ ವ್ಯಾಪ್ತಿಯಲ್ಲಿ ಬರುವ ಆದರ್ಶ ನಗರ ಮತ್ತು ಶಿವ ನಗರದ ಪರಿಸರದಲ್ಲಿ ಬರುವ ಮನೆಗಳಿಗೆ ತೆರಳಿ ಲೋಬೊ ರವರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ವಿಜ್ಞಾಪಿಸಿದರು.ಈ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಲೋಬೊ ಅವರು, 2013ರಿಂದ 2018ರ ಅವಧಿಯಲ್ಲಿ ಶಾಸಕನಾಗಿದ್ದಾಗ ಅನೇಕ ಯೋಜನೆಗಳನ್ನು ತಂದಿದ್ದೇನೆ. ಮಂಗಳೂರನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೋಯ್ಯಲು ಜನರ ಸಹಕಾರ ಅತೀ ಅಗತ್ಯ.ಜನರ ಬೆಂಬಲವಿಲ್ಲದೇ ಯಾವುದೇ ಅಭಿವೃದ್ಧಿ ಆಗುವುದಿಲ್ಲ. ಜನರು ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದಾರೆ. ಖಂಡಿತವಾಗಿ ಒಳ್ಳೆಯ ದಿನಗಳು ಬರಲಿವೆ ಎಂದರು.


ಈ ಸಂದರ್ಭದಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಜಿಲ್ಲಾ ಒಬಿಸಿ ಅಧ್ಯಕ್ಷ ವಿಶ್ವಾಸ್ ದಾಸ್, ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಮಾಜಿ ಕಾರ್ಪೊರೇಟರ್ ರಜನೀಶ್, ಮೇಲ್ವಿನ್ ಲೋಬೊ, ಮಿಥುನ್, ಅಶೋಕ್ ಕೋಟ್ಯಾನ್, ಮೈಕಲ್, ಪ್ರವೀಣ್, ಸಂದೇಶ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು