11:58 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಬಿರುಸಿನ ಚುನಾವಣಾ ಪ್ರಚಾರ

24/04/2023, 17:40

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡಿನ ವ್ಯಾಪ್ತಿಯ ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ನಡೆಯಿತು.
ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಜೆ. ಆರ್. ಲೋಬೊ ಅವರು ಹಾಜರಿದ್ದು ತಮ್ಮ ಭಾಷಣದಲ್ಲಿ ತಾನು ಶಾಸಕನಾಗಿದ್ದಾಗ ಈ ಪ್ರದೇಶದ ಸುಮಾರು 2,000 ಜನರಿಗೆ ಹಕ್ಕು ಪತ್ರಗಳನ್ನು ನೀಡಿದ್ದೇನೆ. ಈ ಹಿಂದೆ ಬೆಂಗ್ರೆ ಪ್ರದೇಶಕ್ಕೆ ಕಂದಾಯ ಗ್ರಾಮ ಇರಲಿಲ್ಲ. ಅದನ್ನು ಕೂಡ ನಾನೇ ಮಾಡಿಸಿದ್ದೆ. ಅದಲ್ಲದೆ ಸ್ಮಾರ್ಟ್ ಸಿಟಿ ಯೋಜನೆ ಮಂಜೂರಾಗಿದ್ದು ಹಳೆ ಬಂದರು ಮತ್ತು ಮೀನುಗಾರಿಕೆಯಿಂದ. ಮೊದಲ ಹಂತದಲ್ಲಿ ಈ ಯೋಜನೆ ಮಂಜೂರು ಆಗಿರಲಿಲ್ಲ. ಬಿಜೆಪಿ ಸಂಸದರು ಇದ್ದೂ ಏನೂ ಪ್ರಯೋಜನ ಆಗಿರಲಿಲ್ಲ. ಆದುದರಿಂದ ನಾನು ಹಳೆ ಬಂದರು ಮತ್ತು ಮೀನುಗಾರಿಕೆ ಇವೆರಡರ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಅಧಿಕಾರಿಗಳಿಗೆ ಅಧ್ಯಯನ ಮಾಡಲು ಹೇಳಿ, ಬಳಿಕ ಎರಡನೇ ಹಂತದಲ್ಲಿ ಮಂಜೂರು ಮಾಡಿಸಿದೆ. ಆದರೂ ಈಗಿನ ಬಿಜೆಪಿ ಶಾಸಕರು ಮೀನುಗಾರಿಕೆ, ಹಳೆ ಬಂದರು ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ.ಅವಕಾಶ ಕೊಟ್ಟರೆ ಖಂಡಿತವಾಗಿಯೂ ಈ ಮೀನುಗಾರಿಕೆ, ಹಳೆ ಬಂದರು ಪ್ರದೇಶವನ್ನು ವಿಶೇಷವಾಗಿ ಒತ್ತು ನೀಡಿ ಅಭಿವೃದ್ಧಿಗೊಳಿಸಲು ಪಣ ತೋಡುವುದಾಗಿ ಹೇಳಿದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಎಂಎಲ್ ಸಿ ಐವನ್ ಡಿಸೋಜ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಹಿರಿಯ ಕಾಂಗ್ರೆಸ್ ನಾಯಕರಾದ ಶೇಖರ್ ಸುವರ್ಣ, ಪ್ರದೇಶ ಕಾಂಗ್ರೆಸ್ ಒಬಿಸಿ ಉಪಾಧ್ಯಕ್ಷ ಚೇತನ್ ಬೆಂಗ್ರೆ,ಜಿಲ್ಲಾ ಕಾಂಗ್ರೆಸ್ ಮೀನುಗಾರಿಕಾ ಘಟಕದ ಅಧ್ಯಕ್ಷ ಹರೀಶ್ ಅಮೀನ್ ಬೆಂಗ್ರೆ,ವಾರ್ಡ್ ಅಧ್ಯಕ್ಷ ಅಬೂಬಕ್ಕರ್ ಅಶ್ರಫ್, ಮಾಜಿ ಅಧ್ಯಕ್ಷ ಆಸೀಫ್ ಬೆಂಗ್ರೆ, ಮಾಜಿ ಕಾರ್ಪೊರೇಟರ್ ಶಕುಂತಲಾ ಬೆಂಗ್ರೆ, ಸದಾಶಿವ ಅಮೀನ್,ಸತೀಶ್ ಕೋಟ್ಯಾನ್, ನವೀನ್ ಕರ್ಕೇರ, ತುಕಾರಾಂ ಕಾರ್ವಿ, ಭೋಜ ಕಾರ್ವಿ, ಸಮದ್, ಪ್ರವೀಣ್, ಅನಿಲ್ ಡಿಸೋಜ, ಮಿಥುನ್, ಪ್ರಸಾದ, ಮೋಹನ್, ಭಾಸ್ಕರ್ ರಾವ್, ಕಾರ್ಪೊರೇಟರ್ ಆಶ್ರಫ್ ಬಜಾಲ್, ರಫೀಕ್ ಕಣ್ಣೂರು, ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು