4:36 PM Wednesday19 - November 2025
ಬ್ರೇಕಿಂಗ್ ನ್ಯೂಸ್
ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ…

ಇತ್ತೀಚಿನ ಸುದ್ದಿ

ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಬಿರುಸಿನ ಚುನಾವಣಾ ಪ್ರಚಾರ

24/04/2023, 17:40

ಮಂಗಳೂರು(reporterkarnataka.com): ಮಹಾನಗರ ಪಾಲಿಕೆಯ 60ನೇ ಬೆಂಗ್ರೆ ವಾರ್ಡಿನ ವ್ಯಾಪ್ತಿಯ ದೋಟ ಬೆಂಗ್ರೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿರುಸಿನ ಪ್ರಚಾರ ನಡೆಯಿತು.
ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಜೆ. ಆರ್. ಲೋಬೊ ಅವರು ಹಾಜರಿದ್ದು ತಮ್ಮ ಭಾಷಣದಲ್ಲಿ ತಾನು ಶಾಸಕನಾಗಿದ್ದಾಗ ಈ ಪ್ರದೇಶದ ಸುಮಾರು 2,000 ಜನರಿಗೆ ಹಕ್ಕು ಪತ್ರಗಳನ್ನು ನೀಡಿದ್ದೇನೆ. ಈ ಹಿಂದೆ ಬೆಂಗ್ರೆ ಪ್ರದೇಶಕ್ಕೆ ಕಂದಾಯ ಗ್ರಾಮ ಇರಲಿಲ್ಲ. ಅದನ್ನು ಕೂಡ ನಾನೇ ಮಾಡಿಸಿದ್ದೆ. ಅದಲ್ಲದೆ ಸ್ಮಾರ್ಟ್ ಸಿಟಿ ಯೋಜನೆ ಮಂಜೂರಾಗಿದ್ದು ಹಳೆ ಬಂದರು ಮತ್ತು ಮೀನುಗಾರಿಕೆಯಿಂದ. ಮೊದಲ ಹಂತದಲ್ಲಿ ಈ ಯೋಜನೆ ಮಂಜೂರು ಆಗಿರಲಿಲ್ಲ. ಬಿಜೆಪಿ ಸಂಸದರು ಇದ್ದೂ ಏನೂ ಪ್ರಯೋಜನ ಆಗಿರಲಿಲ್ಲ. ಆದುದರಿಂದ ನಾನು ಹಳೆ ಬಂದರು ಮತ್ತು ಮೀನುಗಾರಿಕೆ ಇವೆರಡರ ಅಭಿವೃದ್ಧಿಯನ್ನು ಮುಂದಿಟ್ಟುಕೊಂಡು ಅಧಿಕಾರಿಗಳಿಗೆ ಅಧ್ಯಯನ ಮಾಡಲು ಹೇಳಿ, ಬಳಿಕ ಎರಡನೇ ಹಂತದಲ್ಲಿ ಮಂಜೂರು ಮಾಡಿಸಿದೆ. ಆದರೂ ಈಗಿನ ಬಿಜೆಪಿ ಶಾಸಕರು ಮೀನುಗಾರಿಕೆ, ಹಳೆ ಬಂದರು ಅಭಿವೃದ್ಧಿಗೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ.ಅವಕಾಶ ಕೊಟ್ಟರೆ ಖಂಡಿತವಾಗಿಯೂ ಈ ಮೀನುಗಾರಿಕೆ, ಹಳೆ ಬಂದರು ಪ್ರದೇಶವನ್ನು ವಿಶೇಷವಾಗಿ ಒತ್ತು ನೀಡಿ ಅಭಿವೃದ್ಧಿಗೊಳಿಸಲು ಪಣ ತೋಡುವುದಾಗಿ ಹೇಳಿದರು.


ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು, ಮಾಜಿ ಎಂಎಲ್ ಸಿ ಐವನ್ ಡಿಸೋಜ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲಿಂ, ಹಿರಿಯ ಕಾಂಗ್ರೆಸ್ ನಾಯಕರಾದ ಶೇಖರ್ ಸುವರ್ಣ, ಪ್ರದೇಶ ಕಾಂಗ್ರೆಸ್ ಒಬಿಸಿ ಉಪಾಧ್ಯಕ್ಷ ಚೇತನ್ ಬೆಂಗ್ರೆ,ಜಿಲ್ಲಾ ಕಾಂಗ್ರೆಸ್ ಮೀನುಗಾರಿಕಾ ಘಟಕದ ಅಧ್ಯಕ್ಷ ಹರೀಶ್ ಅಮೀನ್ ಬೆಂಗ್ರೆ,ವಾರ್ಡ್ ಅಧ್ಯಕ್ಷ ಅಬೂಬಕ್ಕರ್ ಅಶ್ರಫ್, ಮಾಜಿ ಅಧ್ಯಕ್ಷ ಆಸೀಫ್ ಬೆಂಗ್ರೆ, ಮಾಜಿ ಕಾರ್ಪೊರೇಟರ್ ಶಕುಂತಲಾ ಬೆಂಗ್ರೆ, ಸದಾಶಿವ ಅಮೀನ್,ಸತೀಶ್ ಕೋಟ್ಯಾನ್, ನವೀನ್ ಕರ್ಕೇರ, ತುಕಾರಾಂ ಕಾರ್ವಿ, ಭೋಜ ಕಾರ್ವಿ, ಸಮದ್, ಪ್ರವೀಣ್, ಅನಿಲ್ ಡಿಸೋಜ, ಮಿಥುನ್, ಪ್ರಸಾದ, ಮೋಹನ್, ಭಾಸ್ಕರ್ ರಾವ್, ಕಾರ್ಪೊರೇಟರ್ ಆಶ್ರಫ್ ಬಜಾಲ್, ರಫೀಕ್ ಕಣ್ಣೂರು, ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು