9:49 PM Friday18 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:…

ಇತ್ತೀಚಿನ ಸುದ್ದಿ

ಶಾಸಕರ ಕಳ್ಳರಿದ್ದಾರೆ, ಕಾಂಗ್ರೆಸ್ 150 ಸ್ಥಾನ‌ ಗೆಲ್ಲುವುದು ಅಗತ್ಯ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

25/04/2023, 15:04

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು 150 ಸ್ಥಾನಗಳಲ್ಲಿ ಗೆಲ್ಲುವುದು ಬಹಳ ಮುಖ್ಯ. ಒಂದೆರಡು ಶಾಸಕರ ಕಳ್ಳತನ ಮಾಡಿದ್ರೂ ಸುಭದ್ರ ಸರ್ಕಾರ ಉಳಿಸಲು ಸಾಧ್ಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ, ಗುಜರಾತ್, ಗೋವಾ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕಳವು ಮಾಡಲಾಗಿದೆ. ಇಡಿ, ಐಟಿ ದುರ್ಬಳಕೆ ಮಾಡಿಕೊಳ್ಳುವ ಮೂಲಕ ಕಳವು ಮಾಡುವ ಕೆಲಸ ನಡೆಯುತ್ತಿದೆ.
ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಜನ ಆತಂಕದಲ್ಲಿರುವ ಸಂದರ್ಭದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಮಹತ್ವದ್ದು. ರಾಜ್ಯದಲ್ಲಿ ಡಬಲ್ ಎಂಜಿನ್ ಬಿಜೆಪಿ ಸರ್ಕಾರ ಶೇ 40 ಕಮಿಷನ್ ಪಡೆಯುವ ಮೂಲಕ ಜನರಿಗೆ ಅನ್ಯಾಯ ಮಾಡಿದ್ದು, ಆಡಳಿತ ಯಂತ್ರ ಸಂಪೂರ್ಣ ವಿಫಲವಾಗಿದೆ ಎಂದರು.
ಬಿಜೆಪಿ ಎಲ್ಲಾ ಕಡೆ ಎಟಿಎಂ ಮಷಿನ್ ಇಟ್ಟಿದ್ದಾರೆ. ದುಡ್ಡಿನ ಮೇಲೆ ಬಿಜೆಪಿ ಚುನಾವಣೆ ನಡೆಸುತ್ತಿದೆ. ಮನಿ ಮತ್ತು ಮಸಲ್ ಪವರ್ ಬಳಕೆ ಮಾಡುತ್ತಿದ್ದಾರೆ. ದೇಶದಲ್ಲಿ ಶಿಕ್ಷಣ, ನಿರುದ್ಯೋಗ, ಹೂಡಿಕೆ, ಹಣದುಬ್ಬರ, ಭ್ರಷ್ಟಾಚಾರದ ಬಗ್ಗೆ ದೇಶದ ಪ್ರಧಾನಿ ಅವರು ಮಾತನಾಡುತ್ತಿಲ್ಲ. ಬೆಂಗಳೂರಿನಿಂದ ವಾರಣಾಸಿಗೆ ಮೊನ್ನೆ ಒಂದು ರೈಲು ಬಿಟ್ಟು ಅದನ್ನು ದೊಡ್ಡ ಸುದ್ದಿ ಮಾಡಿದ್ದಾರೆ. ನಾನು ರೈಲ್ವೆ ಸಚಿವ ಆಗಿದ್ದಾಗ 30 ಕ್ಕೂ ಅಧಿಕ ರೈಲು ಹಾಕಿದ್ದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷವು185 ವಿಧಾನಸಭಾ ಕ್ಷೇತ್ರಗಳಿಗೆ ಬೇರೆ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಿತ್ತು. ಕೆಲ ಕಡೆಗಳಲ್ಲಿ ನಾಯಕರ, ಆಕಾಂಕ್ಷಿಗಳ ಬೇಡಿಕೆ ಹೆಚ್ಚಾಗಿದ್ದರಿಂದ ಪಟ್ಟಿ ಬಿಡುಗಡೆ ವಿಳಂಬ ಆಯಿತು ಎಂದರು.


ಪಕ್ಷದ ಟಿಕೆಟ್ ಸಿಗದೇ ಇದ್ದವರೂ ಹತಾಶೆಯಿಂದ ಬೇರೆ ಬೇರೆ ರೀತಿಯಲ್ಲಿ ಆರೋಪ ಮಾಡ್ತಾರೆ ಅದಕ್ಕೆಲ್ಲಾ ಈಗ ಸಮಾಜಿಯಿಸಿ ಕೊಡಲ್ಲ. ನಮ್ಮ ಗುರಿ ಚುನಾವಣೆ ಆಗಿದೆ. ಮೊದಲ ಆದ್ಯತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡುವುದಾಗಿದೆ. ಎಲ್ಲರೂ ಒಗ್ಗಟ್ಟಾಗಿ ಈ ಚುನಾವಣೆ ಎದುರಿಸುತ್ತೇವೆ ಎಂದರು.
ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಹರೀಶ್ ಕುಮಾರ್, ಶಾಸಕರಾದ ಯು.ಟಿ.ಖಾದರ್, ಮಂಜುನಾಥ ಭಂಡಾರಿ, ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ವಕ್ತಾರ ಡಾ.ಶಮಾ ಮುಹಮ್ಮದ್, ಪ್ರಣವ್ ಜ್ಹಾ, ಶಾಸಕ, ಚರಣ್ ಸಿಂಗ್ ಸಪ್ರಾ, ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು