12:31 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಸಿಎಂ ಕುರ್ಚಿಗೆ ಟವೆಲ್ ಹಾಸಿದ ಸಿ.ಟಿ. ರವಿ!: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪರ ಈಶ್ವರಪ್ಪ ಬಹಿರಂಗ ಬ್ಯಾಟಿಂಗ್!!

25/04/2023, 20:32

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಧಿಕಾರಕ್ಕೆ ಬರುವ ಮುನ್ನವೇ ಬಿಜೆಪಿಯಲ್ಲಿ ಸಿಎಂ ಕುರ್ಚಿಗಾಗಿ ಕೂಗು ಹೆಚ್ಚಾಗಲಾರಂಭಿಸಿದೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬ್ಯಾಟಿಂಗ್ ಮಾಡಿದ್ದಾರೆ.
ಕಡೂರು ತಾಲೂಕಿನ ನಿಡಘಟ್ಟದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದ
ಬಹಿರಂಗ ಸಭೆಯಲ್ಲೇ ಸಿ.ಟಿ.ರವಿ ಪರ ಈಶ್ವರಪ್ಪ ಒಲವು ತೋರಿಸಿದ್ದಾರೆ.
ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಈಶ್ವರಪ್ಪ ಅವರು ಬಹಿರಂಗ ಘೋಷಣೆ ಮಾಡಿದ್ದಾರೆ.

ಸಮಾವೇಶದಲ್ಲಿ ಮಾತಾಡುವ ವೇಳೆಯಲ್ಲಿ ಮುಂದಿನ ಸಿಎಂ ಸಿ.ಟಿ.ರವಿ ಆಗಲೆಂದು ಹೇಳಿದ ಈಶ್ವರಪ್ಪ ಹೇಳಿದ್ದಾರೆ.
ಚಿಕ್ಕಮಗಳೂರಿನಿಂದ ಸಿಟಿ ರವಿ ಗೆಲ್ಲಿಸಿ, ಮುಂದಿನ ಮುಖ್ಯಮಂತ್ರಿ ಆಗಬೇಕೆಂದು ಕೂಡ ಈಶ್ವರಪ್ಪ ಆಶಿಸಿದ್ದಾರೆ.
ನಿನ್ನೆ ಮೈಸೂರಿನಲ್ಲಿ ಸಿ.ಟಿ. ರವಿ ಸಿಎಂ ಆಗುವ ಇಂಗಿತವನ್ನು ಹೊರ ಹಾಕಿದ್ದರು. ಇಂದು ಬಹಿರಂಗ ಸಭೆಯಲ್ಲೇ ಈಶ್ವರಪ್ಪ ಅವರು ರವಿ ಸಿಎಂ ಆಗಲಿ ಎನ್ನುವ ಹೇಳಿಕೆ ನೀಡಿದ್ದಾರೆ‌
ರಾಜ್ಯ ರಾಜಕಾರಣದಲ್ಲಿ ಹಾಗೂ ಬಿಜೆಪಿ ಪಾಳಯದಲ್ಲಿ ಈಶ್ವರಪ್ಪ ಅವರ ಹೇಳಿಕೆಗೆ ಅಷ್ಟು ಮಹತ್ವ ಏನೂ ಇಲ್ಲ. ಭ್ರಷ್ಟಾಚಾರ ಆರೋಪದ ಮೇಲೆ ಅವರು ಮಂತ್ರಿ ಪದವಿ ಕಳೆದುಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು