2:34 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ

26/04/2023, 20:24

ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಬುಧವಾರ ಬೆಳಗ್ಗೆ ಕಾಟಿಪಳ್ಳ, ಇಡ್ಯಾ, ಹೊಸಬೆಟ್ಟು, ಕುಳಾಯಿ, ಬೈಕಂಪಾಡಿ, ಪಣಂಬೂರು ಪರಿಸರದಲ್ಲಿ ಬಿಡುವಿಲ್ಲದೆ ಚುನಾವಣಾ ಪ್ರಚಾರ ನಡೆಸಿದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತಾಡಿದ ಅವರು, “ಮಂಗಳೂರು ಉತ್ತರ ಕ್ಷೇತ್ರವನ್ನು ಭವಿಷ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದು ಮತದಾರರನ್ನು ಭೇಟಿಯಾಗಿ ಮತ ಯಾಚನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಇದೆ. ಹೀಗಾಗಿ ಪ್ರತೀ ಮನೆಗಳನ್ನು ಕಾಂಗ್ರೆಸ್ ಗ್ಯಾರಂಟಿ ಅಭಿಯಾನದ ಮೂಲಕ ಜೋಡಿಸಲು ನಮ್ಮ ಕಾರ್ಯಕರ್ತರು ಶ್ರಮವಹಿಸಿ ದುಡಿಯುತ್ತಿದ್ದಾರೆ. ಜನರು ಬಿಜೆಪಿ ಸರಕಾರದ ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಹೊರೆಗಳಿಂದ ಕಂಗಾಲಾಗಿದ್ದಾರೆ. ಮತ್ತೊಮ್ಮೆ ಅದೇ ಸರಕಾರ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಏನಾಗಬಹುದು ಎಂಬ ಸ್ಪಷ್ಟ ಅಂದಾಜು ಜನರಲ್ಲಿದೆ. ಹೀಗಾಗಿ ಜನವಿರೋಧಿ ಬಿಜೆಪಿ ಸರಕಾರಕ್ಕೆ ಜನರೇ ವಿರುದ್ಧವಾಗಿದ್ದಾರೆ” ಎಂದರು.


“ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ಜಾತಿ, ಸಮುದಾಯವನ್ನು ಪ್ರೀತಿಸುವ, ಯುವಜನರಿಗೆ, ವಿದ್ಯಾರ್ಥಿಗಳಿಗೆ ಮತ್ತು ಗೃಹಿಣಿಯರಿಗೆ ನೆರವಾಗುವ ಸುಭದ್ರ ಸರಕಾರ ಜನರಿಗೆ ದೊರೆಯಲಿದೆ. ಜನಸಾಮಾನ್ಯರು ಜೀವನ ಸಾಗಿಸಲು ಯಾವುದೇ ರೀತಿಯಲ್ಲಿ ಭಯ ಪಡಬೇಕಾದ ಅಗತ್ಯವಿಲ್ಲ” ಎಂದರು.
ಕಾಟಿಪಳ್ಳ ಜನತಾ ಕಾಲನಿಯ ಸಿರಿಗಳ ಬೀಡು, ಆಶ್ರಯ ಕಾಲನಿಯ ಕೊರಗಜ್ಜ ಕ್ಷೇತ್ರಕ್ಕೆ ಇನಾಯತ್ ಅಲಿ ಭೇಟಿ ಕೊಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಕೆಪಿಸಿಸಿ ವಕ್ತಾರೆ ಪ್ರತಿಭಾ ಕುಳಾಯಿ, ಜಲೀಲ್ ಬದ್ರಿಯಾ, ಸುರತ್ಕಲ್ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ, ರಾಘವೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು