8:53 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮೈಸೂರಿನ ಮೈಲಾರಿ ಹೊಟೇಲ್ ನಲ್ಲಿ ದೋಸೆ ಹೊಯ್ದ ಪ್ರಿಯಾಂಕಾ ವಾದ್ರ!: ಜನರಿಗೆ ಖುಷಿಯೇ ಖುಷಿ

26/04/2023, 23:46

ಮೈಸೂರು(reporterkarnataka.com); ಜನ ಸಾಮಾನ್ಯರ ಜತೆ ಬೆರೆಯುವ ಮೂಲಕವೇ ಗಾಂಧಿ ಕುಟುಂಬ ಪ್ರಸಿದ್ಧಿಗೆ ಬಂದಿರುವುದು. ಇದೀಗ ಚುನಾವಣಾ ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ ಪ್ರಿಯಾಂಕಾ ವಾದ್ರ ಇಲ್ಲಿನ ಮೈಲಾರಿ ಹೋಟೆಲ್ ಗೆ ಭೇಟಿ ನೀಡಿ ದೋಸೆ ಹೊಯ್ದು ಸುದ್ದಿ ಮಾಡಿದರು.


ಮೈಸೂರಿನ ಮೈಲಾರಿ ಹೋಟೆಲ್ ಅಂದ್ರೆ ಲಲಿತ ಮಹಲ್ ಪ್ಯಾಲೇಸ್, ಬಾಂಬೆಯ ಅಶೋಕ, ದಿಲ್ಲಿಯ ಮೌರ್ಯ ಹೋಟೆಲ್ ತರಹ ಸ್ಟಾರ್ ಹೋಟೆಲ್ ಅಲ್ಲ. ಬದಲಿಗೆ ಅದೊಂದು ಸಣ್ಣ ಗೂಡಿನ ಮಾದರಿಯ ಹೋಟೆಲ್ ಆಗಿದೆ. ಕಾಂಗ್ರೆಸ್ ನ ಯುವ ರಾಣಿ ಪ್ರಿಯಾಂಕಾ ಅವರು ಹೋಟೆಲಿಗೆ ಭೇಟಿ ಕೊಟ್ಟವರು ನೇರವಾಗಿ ನುಗ್ಗಿದ್ದು ಅಡುಗೆ ಮನೆಗೆ. ಪ್ರಿಯಾಂಕಾ ಅವರಿಗೆ ದಕ್ಷಿಣ ಭಾರತದ ದೋಸೆ ಕುರಿತು ಕುತೂಹಲ. ಹೋಟೆಲಿನ ಮಾಲೀಕ ಕಮ್ ಅಡುಗೆ ಭಟ್ಟರಲ್ಲಿ ಮಾಹಿತಿ ಪಡೆದ ಪ್ರಿಯಾಂಕಾ ವಾದ್ರ ಅವರು ಕಾದ ಕಾವಲಿಯ ಮೇಲೆ ದೋಸೆ ಹೊಯ್ದೇ ಬಿಟ್ಟರು. ಉದ್ದಿನ ದಪ್ಪ ದೋಸೆಯನ್ನು ಮಗುಚಿ ಹಾಕಬೇಕೆನ್ನುವ ಮಾಹಿತಿ ಇಲ್ಲದ ಪ್ರಿಯಾಂಕಾ ಅವರು ಅದನ್ನು ಸಿಂಗ್ ಫೋಲ್ಡ್ ಮಾಡಿ ಕಾವಲಿಯಿಂದ ಮೇಲಕ್ಕೆತ್ತಲು ಪ್ರಯತ್ನಿಸಿದಾಗ ಹೋಟೆಲ್ ನ ಅಡುಗೆ ಭಟ್ಟರು ಅದನ್ನು ತಿರುಗಿಸಿ ಹಾಕುವ ಬಗ್ಗೆ ಮಾಹಿತಿ ನೀಡಿದರು. ಒಟ್ಟಿನಲ್ಲಿ ಪ್ರಿಯಾಂಕಾ ಅವರು ದೋಸೆ ಹಾಕುವ ಕುರಿತು ಮಾಹಿತಿ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು