ಇತ್ತೀಚಿನ ಸುದ್ದಿ
ಕೃಷ್ಣಾ ನದಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆ ಸಾವು: ಅಗ್ನಿಶಾಮಕ ದಳ ಕ್ಷಿಪ್ರ ಕಾರ್ಯಾಚರಣೆ ನಡೆಸಿದರೂ ಪ್ರಾಣಪಕ್ಷಿ ಹಾರಿ ಹೋಗಿತ್ತು!
28/04/2023, 00:00
ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com
ಹಲ್ಯಾಳ ಗ್ರಾಮದ ಕೃಷ್ಣಾ ನದಿ ದಡದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆಯರೊಬ್ಬರು ಮೃತಪಟ್ಟಿದ್ದಾರೆ.
ಮೃತ ಮಹಿಳೆಯನ್ನು ರಾಜೇಶ್ರೀ ಮನೋಜ ಮನಪಗೊಳ (43) ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಮಹಿಳೆ ಎಂದು ಗುರುತಿಸಲಾಗಿದೆ.
ಸ್ಥಳೀಯರು ಅಗ್ನಿಶಾಮಕ ಸ್ಥಳಕ್ಕೆ ಕರೆ ಮಾಡಿ ತಿಳಿಸಿದ ಕೇವಲ ಏಳೇ ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿ ಮಹಿಳೆಯನ್ನು ಹೊರತೆಗೆಯಲು ಕೇವಲ ಐದೇ ನಿಮಿಷ ತೆಗೆದುಕೊಂಡರು ಅಷ್ಟರಲ್ಲಿ ಆ ಮಹಿಳೆಯ ಪ್ರಾಣ ಪಕ್ಷಿ ಹಾರಿ ಹೋಗಿದ್ದು ಮಹಿಳೆಯ ದುರದೃಷ್ಟ. ಮೃತ ಮಹಿಳೆಯನ್ನು ಅಷ್ಟೊಂದು ಶೀಘ್ರವಾಗಿ ಪತ್ತೆ ಹಚ್ಚಿದ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು
ಅಗ್ನಿಶಾಮಕ ಸಿಬ್ಬಂದಿಗಳಾದ ಪ್ರಭಾರ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ ಬೀ ಬಂದಾಲ. ವಾಹನ ಚಾಲಕರಾದ ಎಂ ಎಸ್ ಕುಂಬಾರ. ಎಸ್ ಡಿ ಹಮಾಪುರ. ಶಿವಯ್ಯ ಮಠಪತಿ ಸಿಬ್ಬಂದಿಗಳು ಭಾಗವಹಿಸಿದರು.
ಈ ಕುರಿತು ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ














