1:52 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಐಡಿಯಲ್ ಪಬ್ಬಾಸ್ ನಲ್ಲಿ ಐಸ್ ಕ್ರೀಂ ಸವಿದ ಕಾಂಗ್ರೆಸ್ ಯುವರಾಜ!: ಗಡಬಡ್, ಚಾಕುಲೇಟ್ ಡ್ಯಾಡ್ ಗೆ ರಾಹುಲ್ ಫಿದಾ!!

28/04/2023, 15:30

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporter Karnataka@gmail.com

ಐಸ್ ಕ್ರೀಂ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ…? ಅಬಾಲವೃದ್ದರ ವರೆಗೆ ಎಲ್ಲರೂ ಐಸ್ ಕ್ರೀಂ ಪ್ರಿಯರೇ. ಅದರಲ್ಲೂ ಕರಾವಳಿಯ ಮನೆ ಮಾತಾಗಿರುವ ಐಡಿಯಲ್ ಐಸ್ ಕ್ರೀಂ ಯಾರಿಗೆ ಬೇಡ ಹೇಳಿ?. ಐಡಿಯಲ್ ಅಂದ್ರೆ ಕರಾವಳಿ ಜನ ಮುಗಿ ಬೀಳ್ತಾರೆ. ಕ್ಯೂ ನಿಂತು ಐಸ್ ಕ್ರೀಂ ಮೆಲ್ಲುತ್ತಾರೆ. ಹಾಗೆ ಕಾಂಗ್ರೆಸ್ ನ ಯುವರಾಜ ರಾಹುಲ್ ಗಾಂಧಿ ಅವರು ಕೂಡ ಐಡಿಯಲ್ ಐಸ್ ಕ್ರೀಂಗೆ ಮನಸೋತಿದ್ದಾರೆ.
ರಾಹುಲ್ ಗಾಂಧಿ ನಿನ್ನೆ ಉಡುಪಿಗೆ ಆಗಮಿಸಿದ್ದರು. ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಮಂಗಳೂರಿಗೆ ಬಂದಿದ್ದಾರೆ. ಇದು ಅವರ ಎಲೆಕ್ಷನ್ ಟೂರ್. ಕಾಪುವಿನಲ್ಲಿ ಮೋಗವೀರ ಸಮುದಾಯದ ಜತೆ ಸಂವಾದ ನಡೆಸಿದ ಅವರು ಸಂಜೆ ಮಂಗಳೂರಿನ ಹೊರವಲಯದ ಅಡ್ಯಾರ್ ಸಮೀಪದ ಸಹ್ಯಾದ್ರಿ ಕಾಲೇಜು ಕ್ಯಾಂಪಸ್ ನಲ್ಲಿ ಕಾಂಗ್ರೆಸ್ ನ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ್ದಾರೆ.
ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಭಾಗವಹಿಸಿ ಬಳಿಕ ರಾತ್ರಿ ಅಲ್ಲಿಂದ ರಾಹುಲ್ ಅವರು ನಗರಕ್ಕೆ ಆಗಮಿಸಿ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ತೆರಳಿ ಐಸ್ ಕ್ರೀಮ್ ಸವಿದಿದ್ದಾರೆ. ಐಡಿಯಲ್ ಐಸ್ ಕ್ರೀಮ್ ಸ್ಪೆಷಲ್ ಆದ ಗಡಬಡ್, ಚಾಕುಲೇಟ್ ಡ್ಯಾಡ್, ಪಾನ್ ಐಸ್ ಕ್ರೀಂ, ಸಿರಾಮುಸ್ ಸೇರಿದಂತೆ ಹಲವು ಪ್ಲೆವರ್ ಗಳ ಐಸ್ ಕ್ರೀಂಗಳನ್ನು ಸೇವಿಸಿದರು. ಎಲ್ಲ ಐಸ್ ಕ್ರೀಂ ಗಳಿಗಿಂತ್ ಗಡಬಡ್ ಹಾಗೂ ಚಾಕಲೇಟ್ ಡ್ಯಾಡ್ರಾ ರಾಹುಲ್ ಅವರಿಗೆ ತುಂಬಾ ಇಷ್ಟವಾಯಿತು.ಎಂದು ಅವರ ಜತೆಗಿದ್ದ ಮುಖಂಡರರು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಮುಂತಾದವರು ಅವರ ಜತೆಗಿದ್ದರು. ರಾಹುಲ್ ಗಾಂಧಿ ಅವರ ಜತೆಗೆ ಸೆಲ್ಫಿಗಾಗಿ ಜನರು ಮುಗಿಬಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು