12:21 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

28/04/2023, 21:48

ತುಮಕೂರು(reporterkarnataka.com): ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಕಲ್ಲೇಟಿನಿಂದ ಅವರ ತಲೆಗೆ ಗಾಯಗಳಾಗಿವೆ.
ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿಯಲ್ಲಿ ಶುಕ್ರವಾರ ಪ್ರಚಾರದ ವೇಳೆ ಕಲ್ಲು ತೂರಟ ನಡೆಸಲಾಯಿತು. ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ ಅವರ ತಲೆಗೆ ಗಾಯವಾಗಿದ್ದು, ಸಮೀಪದ ಅಕ್ಕಿರಾಮಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಪ್ರಚಾರ ಸಮಯದಲ್ಲಿ ಕಾರ್ಯಕರ್ತರು ಪರಮೇಶ್ವರ ಅವರನ್ನು ಎತ್ತಿಕೊಂಡು ಹೂವು ಸುರಿಯುತ್ತಿದ್ದರು.. ಈ ಸಂದರ್ಭದಲ್ಲಿಯೇ ತೂರಿಬಂದ ಕಲ್ಲು ತಲೆಗೆ ಬಿದ್ದಿದೆ. ತಲೆಯಿಂದ ರಕ್ತ ಸುರಿದಿದ್ದು, ಬಟ್ಟೆಯಿಂದ ತಲೆಯನ್ನು ಒತ್ತಿ ಹಿಡಿದುಕೊಂಡಿದ್ದಾರೆ. ನಂತರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದೆ. ಹೂವು ಸುರಿಯುವ ಸಂದರ್ಭ ನೋಡಿಕೊಂಡು ದುಷ್ಕರ್ಮಿಗಳು ಕಲ್ಲು ತೂರಿರಬಹುದು ಎನ್ನಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು