10:16 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅಮಿತ್ ಶಾ ರೋಡ್ ಶೋಗೆ ಕ್ಷಣಗಣನೆ ಆರಂಭ: ಕಡಲನಗರಿಯ ಕೇಸರಿ ಪಡೆಗೆ ಮತ್ತಷ್ಟು ರಂಗು

29/04/2023, 15:13

ಮಂಗಳೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ನಡುವೆ ನಗರವನ್ನು ಶೃಂಗಾರ ಮಾಡಲಾಗಿದೆ. ಹಂಪನಕಟ್ಟೆ, ನವಭಾರತ ಸರ್ಕಲ್ ಪ್ರದೇಶ ಕೇಸರಿಮಯವಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೆಲವೇ ತಾಸುಗಳಲ್ಲಿ ಅಮಿತ್ ಶಾ ಅವರ ಬೃಹತ್ ರೋಡ್‌ ಶೋ ನಡೆಸಲಿದೆ. ಶಾ ಭೇಟಿ ಹಿನ್ನೆಲೆಯಲ್ಲಿ
ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದೆ.


ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಕೊಡಿಯಾಲ್‌ಬೈಲ್‌ನ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ವರೆಗೆ ಈ ರೋಡ್‌ ಶೋ ನಡೆಯಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ. ಸಂಜೆ 4:30ರಿಂದ ರೋಡ್‌ ಶೋ ಪ್ರಾರಂಭವಾಗಲಿದೆ.
ಅಮಿತ್‌ ಶಾ ಅವರ ರೋಡ್‌ ಶೋ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಸೃಷ್ಟಿಸಲಿದೆ. ಆ ಮೂಲಕ ಚುನಾವಣೆಯ ಕಾವು ಇನ್ನಷ್ಟು ಏರಲಿದೆ.


ನಾಳೆ ಅಪರಾಹ್ನ 2:30ಕ್ಕೆ ಉಡುಪಿಗೆ ಆಗಮಿಸಲಿರುವ ಅಮಿತ್ ಶಾ ಅವರು ಬಳಿಕ ಬೈಂದೂರಿನಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಅನಂತರ ಸಂಜೆ ಮಂಗಳೂರಿಗೆ ಆಗಮಿಸಿ ರೋಡ್‌ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು