8:33 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಅಮಿತ್ ಶಾ ರೋಡ್ ಶೋಗೆ ಕ್ಷಣಗಣನೆ ಆರಂಭ: ಕಡಲನಗರಿಯ ಕೇಸರಿ ಪಡೆಗೆ ಮತ್ತಷ್ಟು ರಂಗು

29/04/2023, 15:13

ಮಂಗಳೂರು(reporterkarnataka.com): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ನಡುವೆ ನಗರವನ್ನು ಶೃಂಗಾರ ಮಾಡಲಾಗಿದೆ. ಹಂಪನಕಟ್ಟೆ, ನವಭಾರತ ಸರ್ಕಲ್ ಪ್ರದೇಶ ಕೇಸರಿಮಯವಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಅದರ ಭಾಗವಾಗಿ ಕೆಲವೇ ತಾಸುಗಳಲ್ಲಿ ಅಮಿತ್ ಶಾ ಅವರ ಬೃಹತ್ ರೋಡ್‌ ಶೋ ನಡೆಸಲಿದೆ. ಶಾ ಭೇಟಿ ಹಿನ್ನೆಲೆಯಲ್ಲಿ
ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿದೆ.


ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಕೊಡಿಯಾಲ್‌ಬೈಲ್‌ನ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ವರೆಗೆ ಈ ರೋಡ್‌ ಶೋ ನಡೆಯಲಿದ್ದು, ಸಾವಿರಾರು ಮಂದಿ ಕಾರ್ಯಕರ್ತರು, ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ. ಸಂಜೆ 4:30ರಿಂದ ರೋಡ್‌ ಶೋ ಪ್ರಾರಂಭವಾಗಲಿದೆ.
ಅಮಿತ್‌ ಶಾ ಅವರ ರೋಡ್‌ ಶೋ ಕರಾವಳಿ ಭಾಗದಲ್ಲಿ ಭಾರೀ ಸಂಚಲನ ಸೃಷ್ಟಿಸಲಿದೆ. ಆ ಮೂಲಕ ಚುನಾವಣೆಯ ಕಾವು ಇನ್ನಷ್ಟು ಏರಲಿದೆ.


ನಾಳೆ ಅಪರಾಹ್ನ 2:30ಕ್ಕೆ ಉಡುಪಿಗೆ ಆಗಮಿಸಲಿರುವ ಅಮಿತ್ ಶಾ ಅವರು ಬಳಿಕ ಬೈಂದೂರಿನಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಅನಂತರ ಸಂಜೆ ಮಂಗಳೂರಿಗೆ ಆಗಮಿಸಿ ರೋಡ್‌ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು