6:54 AM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು