4:14 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು