12:12 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು