6:05 AM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಕೋಲಾರ ಜಿಲ್ಲಾದ್ಯಂತ ಭಾರೀ ವರ್ಷಧಾರೆ : ಒಂದೇ ವಾರದಲ್ಲಿ ದಾಖಲೆಯಾಯಿತು 44.3 ಮಿಮೀ ಮಳೆ 

15/07/2021, 18:29

ಶಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ 

info.reporterkarnataka@gmail.com

ಜಿಲ್ಲೆಯಾದ್ಯಂತ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದ್ದು , ಇನ್ನೂ ಮುಂದುವರೆದಿದೆ. ನಿರಂತರ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ , ಕುಂಟೆಗಳು , ಹಳ್ಳಗಳಲ್ಲಿ ನೀರು ಹರಿಯುತ್ತಿದೆ . ಇಡೀ ವಾತಾವರಣ ಹಚ್ಚ ಹಸಿರಿನಿಂದ ಕೂಡಿದ್ದು , ಮಲೆನಾಡನ್ನೂ ಮೀರಿಸುವಂತಹ ಕಣ್ಮನ ಸೆಳೆಯುವ ವಾತಾವರಣ ನಿರ್ಮಾಣವಾಗಿದೆ . 2021 ರ ಜನವರಿ 1 ರಿಂದ ಜುಲೈ 15 ರವರೆಗೆ ವಾಡಿಕೆಯ 214.2 ಮಿಮೀ ಮಳೆಯ ಬದಲು 340.1 ಮಿಮೀ ಮಳೆ ಸುರಿದಿದ್ದು , ವಾಡಿಕೆಗಿಂತ 125 ಮಿಮೀ ಮಳೆ ಹೆಚ್ಚಿಗೆ ಸುರಿದಿದೆ . ಮಳೆಗಾಲ ಆರಂಭದ ಜೂನ್ 1 ರಿಂದ ಜುಲೈ 15 ರವರೆಗೆ ವಾಡಿಕೆಯ 97 ಮಿಮೀ ಮಳೆಯ ಬದಲು 180.5 ಮಿಮೀ ಮಳೆ ಸುರಿದಿದೆ . ಜುಲೈ 1 ರಿಂದ 15 ರವರೆಗೆ ಕಳೆದ 15 ದಿನಗಳಲ್ಲಿ ವಾಡಿಕೆಯ 31.5 ಮಿಮೀ ಮಳಯ ಬದಲಾಗಿ 107.4 ಮಿಮೀ ಮಳೆ ಸುರಿದಿದೆ . ಒಟ್ಟಿನಲ್ಲಿ ಈವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿದಿದೆ . ಬೆಳಗಳಿಗೆ ಆತಂಕ , ಜನಜೀವನ ಅಸ್ತವ್ಯಸ್ತ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಮುಂಗಾರಿನ ಬೆಳಗಳು ಹಳದಿ ಬಣ್ಣಕ್ಕೆ ತಿರುಗುವ ಆತಂಕ ಎದುರಾಗಿದೆ . ಜಿಲ್ಲೆಯ ಕೋಲಾರ , ಮಾಲೂರು , ಶ್ರೀನಿವಾಸಪುರ ತಾಲೂಕುಗಳಲ್ಲಿ ಯತೇಚ್ಚವಾಗಿ ಮಳೆಯಾಗಿದೆ . ದೇಶದಾದ್ಯಂತ ಮುಂಗಾರುಮಳ ಜುಲೈ 13 ರಿಂದ ಪ್ರಾರಂಭವಾಗಿದ್ದು ಮುಂದಿನ ಐದು ದಿನಗಳಲ್ಲಿ ಜಿಲ್ಲಾದ್ಯಂ ಹಗುರದಿಂದ ಸಾಧಾರಣ ಮಳೆಯಾಗುಮ್ಮ … ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ . ಈ ರೀತಿಯ ಮಳೆ ಇದೇ ರೀತಿ ಮುಂದುವರೆದರೆ ಬೆಳೆಗಳ ಎಲೆಗಳು ಹಳದಿ ರ್ವತಿ – ಕ್ಕೆ ತಿರುಗಿ , ಬೆಳೆಗಳಲ್ಲಿ ರೋಗ ಮತ್ತು ಕೀಟಗಳ ಹಾವಳಿ ಹೆಚ್ಚಾಗಿ ಇಳುವರಿಯ ಮೇಲೆ ಪರಿಣಾಮ ಬೀರುತ್ತದೆ . ಮುಂದಿನ ದಿನಗಳಲ್ಲಿ ಮಳೆ ಸಂಭವಿಸುವುದರ ಪರಿಣಾಮವಾಗಿ ರೈತರು .. ತಮ್ಮ ಕೃಷಿ ಚಟುವಟಿಕೆಗಳಾದ , ಬಿತ್ತನೆ ಮಾಡುವುದು , ಗೊಬ್ಬರ ನೀಡುವುದು ಹಾಗು ರೋಗ ಹಾಗೂ ಕೀಟನಾಶಕಗಳ ಸಿಂಪರಣೆಯನ್ನು ಮುಂದೂಡಬೇಕೆಂದು ಕೃಷಿ ಹವಾಮಾನ ತಜ್ಞರಾದ ಸ್ವಾತಿ ಜಿ.ಆರ್‌ . ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು