10:52 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲೇ ಗೃಹ ಸಚಿವ ಅಮಿತ್ ಶಾ ರಾತ್ರಿ ವಾಸ್ತವ್ಯ: ವಿಮಾನ ಟೇಕಾಫ್ ಆಗಲೇ ಇಲ್ಲ, ಪ್ರಧಾನ್ ಮಂಗಳೂರಿಗೆ ಬರಲೇ ಇಲ್ಲ!!

30/04/2023, 11:30

ಮಂಗಳೂರು(reporterkarnataka.com):
ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರೋಡ್ ಶೋಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ರಾತ್ರಿಯೇ ಮಂಗಳೂರಿನಿಂದ ನಿರ್ಗಮಿಸಬೇಕಿತ್ತು. ಹಾಗೆ ಶನಿವಾರ ರಾತ್ರಿಯೇ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಆಗಮಿಸಿತ್ತು. ಆದರೆ ಬೆಂಗಳೂರಿನಲ್ಲಿ ಸುರಿದ ಮಳೆ ಇದಕ್ಕೆಲ್ಲ ಕಲ್ಲು ಹಾಕಿತ್ತು.!
ಅಮಿತ್ ಶಾ ಅವರ ರೋಡ್ ಶೋ ಮುಗಿದ ಬಳಿಕ ನಗರದ ರಾಷ್ಟ್ರಕವಿ ಡಾ. ಗೋವಿಂದ ಪೈ ಸರ್ಕಲ್ ಬಳಿ ಇರುವ ಓಶಿಯನ್ ಪರ್ಲ್ ಹೊಟೇಲ್ ನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆಗೆ ಸಂಬಂಧಿಸಿದ ಸಭೆ ನಡೆಯಲಿತ್ತು. ಇದರಲ್ಲಿ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಬಿಜೆಪಿಯ ಅಗ್ರಪಂಕ್ತಿಯ ನಾಯಕರು ಭಾಗವಹಿಸುವವರಿದ್ದರು. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಂಜೆ ವೇಳೆ ಬಂದ ಭಾರಿ ಮಳೆಯಿಂದ ಪ್ರಧಾನ್ ಅವರು ಬರಬೇಕಿದ್ದ ವಿಮಾನ ಟೇಕಾಫ್ ಆಗಲೇ ಇಲ್ಲ. ನಂತರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಅಮಿತ್ ಶಾ ಅವರು ಸಭೆ ನಡೆಸಿದರು. ರಾತ್ರಿ ಮಂಗಳೂರಿನಲ್ಲೇ ತಂಗಿದ್ದ ಅಮಿತ್ ಶಾ ಅವರು ಭಾನುವಾರ ಬೆಳಗ್ಗೆ ನಿರ್ಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು