10:44 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲೇ ಗೃಹ ಸಚಿವ ಅಮಿತ್ ಶಾ ರಾತ್ರಿ ವಾಸ್ತವ್ಯ: ವಿಮಾನ ಟೇಕಾಫ್ ಆಗಲೇ ಇಲ್ಲ, ಪ್ರಧಾನ್ ಮಂಗಳೂರಿಗೆ ಬರಲೇ ಇಲ್ಲ!!

30/04/2023, 11:30

ಮಂಗಳೂರು(reporterkarnataka.com):
ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರೋಡ್ ಶೋಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ರಾತ್ರಿಯೇ ಮಂಗಳೂರಿನಿಂದ ನಿರ್ಗಮಿಸಬೇಕಿತ್ತು. ಹಾಗೆ ಶನಿವಾರ ರಾತ್ರಿಯೇ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಆಗಮಿಸಿತ್ತು. ಆದರೆ ಬೆಂಗಳೂರಿನಲ್ಲಿ ಸುರಿದ ಮಳೆ ಇದಕ್ಕೆಲ್ಲ ಕಲ್ಲು ಹಾಕಿತ್ತು.!
ಅಮಿತ್ ಶಾ ಅವರ ರೋಡ್ ಶೋ ಮುಗಿದ ಬಳಿಕ ನಗರದ ರಾಷ್ಟ್ರಕವಿ ಡಾ. ಗೋವಿಂದ ಪೈ ಸರ್ಕಲ್ ಬಳಿ ಇರುವ ಓಶಿಯನ್ ಪರ್ಲ್ ಹೊಟೇಲ್ ನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆಗೆ ಸಂಬಂಧಿಸಿದ ಸಭೆ ನಡೆಯಲಿತ್ತು. ಇದರಲ್ಲಿ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಬಿಜೆಪಿಯ ಅಗ್ರಪಂಕ್ತಿಯ ನಾಯಕರು ಭಾಗವಹಿಸುವವರಿದ್ದರು. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಂಜೆ ವೇಳೆ ಬಂದ ಭಾರಿ ಮಳೆಯಿಂದ ಪ್ರಧಾನ್ ಅವರು ಬರಬೇಕಿದ್ದ ವಿಮಾನ ಟೇಕಾಫ್ ಆಗಲೇ ಇಲ್ಲ. ನಂತರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಅಮಿತ್ ಶಾ ಅವರು ಸಭೆ ನಡೆಸಿದರು. ರಾತ್ರಿ ಮಂಗಳೂರಿನಲ್ಲೇ ತಂಗಿದ್ದ ಅಮಿತ್ ಶಾ ಅವರು ಭಾನುವಾರ ಬೆಳಗ್ಗೆ ನಿರ್ಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು