1:12 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲೇ ಗೃಹ ಸಚಿವ ಅಮಿತ್ ಶಾ ರಾತ್ರಿ ವಾಸ್ತವ್ಯ: ವಿಮಾನ ಟೇಕಾಫ್ ಆಗಲೇ ಇಲ್ಲ, ಪ್ರಧಾನ್ ಮಂಗಳೂರಿಗೆ ಬರಲೇ ಇಲ್ಲ!!

30/04/2023, 11:30

ಮಂಗಳೂರು(reporterkarnataka.com):
ಎಲ್ಲವೂ ಅಂದುಕೊಂಡಂತೆ ನಡೆಯುತ್ತಿದ್ದರೆ ರೋಡ್ ಶೋಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ರಾತ್ರಿಯೇ ಮಂಗಳೂರಿನಿಂದ ನಿರ್ಗಮಿಸಬೇಕಿತ್ತು. ಹಾಗೆ ಶನಿವಾರ ರಾತ್ರಿಯೇ ಬಿಜೆಪಿ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಆಗಮಿಸಿತ್ತು. ಆದರೆ ಬೆಂಗಳೂರಿನಲ್ಲಿ ಸುರಿದ ಮಳೆ ಇದಕ್ಕೆಲ್ಲ ಕಲ್ಲು ಹಾಕಿತ್ತು.!
ಅಮಿತ್ ಶಾ ಅವರ ರೋಡ್ ಶೋ ಮುಗಿದ ಬಳಿಕ ನಗರದ ರಾಷ್ಟ್ರಕವಿ ಡಾ. ಗೋವಿಂದ ಪೈ ಸರ್ಕಲ್ ಬಳಿ ಇರುವ ಓಶಿಯನ್ ಪರ್ಲ್ ಹೊಟೇಲ್ ನಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಚುನಾವಣೆಗೆ ಸಂಬಂಧಿಸಿದ ಸಭೆ ನಡೆಯಲಿತ್ತು. ಇದರಲ್ಲಿ ಧರ್ಮೇಂದ್ರ ಪ್ರಧಾನ್ ಸೇರಿದಂತೆ ಬಿಜೆಪಿಯ ಅಗ್ರಪಂಕ್ತಿಯ ನಾಯಕರು ಭಾಗವಹಿಸುವವರಿದ್ದರು. ಆದರೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಂಜೆ ವೇಳೆ ಬಂದ ಭಾರಿ ಮಳೆಯಿಂದ ಪ್ರಧಾನ್ ಅವರು ಬರಬೇಕಿದ್ದ ವಿಮಾನ ಟೇಕಾಫ್ ಆಗಲೇ ಇಲ್ಲ. ನಂತರ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಅಮಿತ್ ಶಾ ಅವರು ಸಭೆ ನಡೆಸಿದರು. ರಾತ್ರಿ ಮಂಗಳೂರಿನಲ್ಲೇ ತಂಗಿದ್ದ ಅಮಿತ್ ಶಾ ಅವರು ಭಾನುವಾರ ಬೆಳಗ್ಗೆ ನಿರ್ಗಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು