10:38 AM Tuesday31 - March 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ…

ಇತ್ತೀಚಿನ ಸುದ್ದಿ

ಸಂಗೀತ ಪರಂಪರೆ ಉಳಿಸಲು ಹಲವು ಯೋಜನೆ: ಬಂಟ್ವಾಳ ಸಂಗೀತ ಪರಿಷತ್ ಸಭೆಯಲ್ಲಿ ನಿರ್ಣಯ

30/04/2023, 12:39

ಬಂಟ್ವಾಳ(reporterkarnataka.com): ಸಂಗೀತ ಪರಂಪರೆಯ ಉಳಿವಿಗಾಗಿ ಸಾರ್ವಜನಿಕ ರ ಗಮನ ಸೆಳೆಯುವಂತಾಗಲು, ಸಂಗೀತ ಶ್ರೋತೃಗಳನ್ನು ಸೃಷ್ಟಿಸಿ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಂಗೀತ ಪರಿಷತ್ ಬಂಟ್ವಾಳ ಇದರ ಸಭೆಯಲ್ಲಿ ನಿರ್ಣಯಿಸಲಾಯಿತು.
ಸಂಗೀತ ಪರಿಷತ್ ಬಂಟ್ವಾಳ ಹಾಗೂ ಸರ್ಗಂ ಸಂಗೀತ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ಸಭಾ ವೇದಿಕೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಡಾ. ಎಂ.ಎಸ್. ಭಟ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಡಾ. ಎನ್. ಸೋಮಶೇಖರ ಮಯ್ಯ , ಡಾ. ಗಣೇಶ್ ಬಾಳಿಗ, ವಕೀಲರಾದ ಅಜಿತ್ ಕುಮಾರ್, ಅನಿತಾ ಪ್ರಭು ಮೊದಲಾದವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರು.
ಬಂಟ್ವಾಳ ತಾಲೂಕಿನಾದ್ಯಾಂತ ತೆರೆಯ ಮರೆಯಲ್ಲಿ ಉಳಿದಿರುವ ಪ್ರತಿಭಾವಂತ ಬಾಲ/ ಯುವ ವೃಂದ ದವರಿಗಾಗಿ ಶಾಸ್ತ್ರೀಯ ಹಾಗೂ ಲಘು ಶಾಸ್ತ್ರೀಯ ಸಂಗೀತ ಸ್ಪರ್ಧೆ ಗಳನ್ನು ನಡೆಸುವುದು, ಸಂಗೀತ ಪ್ರಾತ್ಯಕ್ಷಿಕೆಯು ಅಪರೂಪವಾಗುತ್ತಿರೋ ಈ ಕಾಲಘಟ್ಟದಲ್ಲಿ ಜನಪ್ರಿಯ ಕಲಾವಿದರಿಂದ ಸಂಗೀತದ ಮಹತ್ವ ಬಗ್ಗೆ ಉಪನ್ಯಾಸ ದೊಂದಿಗೆ ಸಂಗೀತ ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳನ್ನು ನಿಯೋಜಿಸುವುದು ಸೂಕ್ತವಿರುವುದಾಗಿ ಅಭಿಪ್ರಾಯಪಡಲಾಗಿ ನಿರ್ಣಯ ಕೈಗೊಳ್ಳಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು