4:54 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಸಂಗೀತ ಪರಂಪರೆ ಉಳಿಸಲು ಹಲವು ಯೋಜನೆ: ಬಂಟ್ವಾಳ ಸಂಗೀತ ಪರಿಷತ್ ಸಭೆಯಲ್ಲಿ ನಿರ್ಣಯ

30/04/2023, 12:39

ಬಂಟ್ವಾಳ(reporterkarnataka.com): ಸಂಗೀತ ಪರಂಪರೆಯ ಉಳಿವಿಗಾಗಿ ಸಾರ್ವಜನಿಕ ರ ಗಮನ ಸೆಳೆಯುವಂತಾಗಲು, ಸಂಗೀತ ಶ್ರೋತೃಗಳನ್ನು ಸೃಷ್ಟಿಸಿ ಹೆಚ್ಚಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಂಗೀತ ಪರಿಷತ್ ಬಂಟ್ವಾಳ ಇದರ ಸಭೆಯಲ್ಲಿ ನಿರ್ಣಯಿಸಲಾಯಿತು.
ಸಂಗೀತ ಪರಿಷತ್ ಬಂಟ್ವಾಳ ಹಾಗೂ ಸರ್ಗಂ ಸಂಗೀತ ಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ಸಭಾ ವೇದಿಕೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಯಿತು. ಡಾ. ಎಂ.ಎಸ್. ಭಟ್ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಡಾ. ಎನ್. ಸೋಮಶೇಖರ ಮಯ್ಯ , ಡಾ. ಗಣೇಶ್ ಬಾಳಿಗ, ವಕೀಲರಾದ ಅಜಿತ್ ಕುಮಾರ್, ಅನಿತಾ ಪ್ರಭು ಮೊದಲಾದವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿರು.
ಬಂಟ್ವಾಳ ತಾಲೂಕಿನಾದ್ಯಾಂತ ತೆರೆಯ ಮರೆಯಲ್ಲಿ ಉಳಿದಿರುವ ಪ್ರತಿಭಾವಂತ ಬಾಲ/ ಯುವ ವೃಂದ ದವರಿಗಾಗಿ ಶಾಸ್ತ್ರೀಯ ಹಾಗೂ ಲಘು ಶಾಸ್ತ್ರೀಯ ಸಂಗೀತ ಸ್ಪರ್ಧೆ ಗಳನ್ನು ನಡೆಸುವುದು, ಸಂಗೀತ ಪ್ರಾತ್ಯಕ್ಷಿಕೆಯು ಅಪರೂಪವಾಗುತ್ತಿರೋ ಈ ಕಾಲಘಟ್ಟದಲ್ಲಿ ಜನಪ್ರಿಯ ಕಲಾವಿದರಿಂದ ಸಂಗೀತದ ಮಹತ್ವ ಬಗ್ಗೆ ಉಪನ್ಯಾಸ ದೊಂದಿಗೆ ಸಂಗೀತ ಪ್ರಾತ್ಯಕ್ಷಿಕೆ ಕಾರ್ಯಕ್ರಮಗಳನ್ನು ನಿಯೋಜಿಸುವುದು ಸೂಕ್ತವಿರುವುದಾಗಿ ಅಭಿಪ್ರಾಯಪಡಲಾಗಿ ನಿರ್ಣಯ ಕೈಗೊಳ್ಳಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು