4:05 AM Thursday26 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ, ಬಂಟ್ವಾಳ ಮೂಲದ ರಾಧೇಶ್ ಮಯ್ಯಗೆ ಫ್ರೆಶರ್ ಅವಾರ್ಡ್

01/05/2023, 00:40

ಬೆಂಗಳೂರು(reporterkarnataka.com): ಬೆಂಗಳೂರಿನ ಗ್ರೇಟ್ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ರಾಧೇಶ್ ಮಯ್ಯ ಅವರು ಕಾಲೇಜಿನ ಫ್ರೆಶರ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕಾಲೇಜಿನಲ್ಲಿ ಕಳೆದ ವಾರ ನಡೆದ 2023ನೇ ಸಾಲಿನ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ರಾಧೇಶ್ ಮಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಬೆಂಗಳೂರಿನ 12 ಕಾಲೇಜುಗಳಿಂದ ರೇವಾ ವಿಶ್ವವಿದ್ಯಾಲಯದ ಕಾಲೇಜು ಭಾಗವಹಿಸುವವರಲ್ಲಿ 2ನೇ ಸ್ಥಾನವನ್ನು ಗೆದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ
ರಾಧೇಶ್ ಮಯ್ಯ ಅವರು ಮಾರ್ಕೆಟಿಂಗ್ ಪ್ರಮೋಶನ್ ಮಾಡುವ ಚಾಲೆಂಜ್ ನಲ್ಲಿ ಕೂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದರಲ್ಲಿ 12 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದು ಎಂಬಿಎ ವಿದ್ಯಾರ್ಥಿ ಗಳಿಗೆ ಮೀಸಲಾದ ಚಾಲೆಂಜ್ ಆಗಿದೆ. ಇನ್ನು ಫ್ರೆಶರ್ ಅವಾರ್ಡ್ ಕಾಲೇಜಿನಲ್ಲಿ ಹಾಡುಗಾರಿಕೆ, ಕಲಿಕೆ ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಗೆ ಮೀಸಲಾದ ಅವಾರ್ಡ್ ಆಗಿದೆ. ಅದು ಈ ಬಾರಿ ರಾಧೇಶ್ ಮಯ್ಯ ಅವರ ಪಾಲಾಗಿದೆ.
ರಾಧೇಶ್ ಮಯ್ಯ ಅವರು ನಿವೃತ್ತ ಕಂದಾಯ ಅಧಿಕಾರಿ ಹಾಗೂ ಸಂಗೀತ ವಿದ್ವಾಂಸ ಡಾ. ಎನ್. ಸೋಮಶೇಖರ್ ಮಯ್ಯ ಬಂಟ್ವಾಳ ಹಾಗೂ ಶಿಕ್ಷಕಿ ಶ್ರೀವಾಣಿ ಮಯ್ಯ ಅವರ ಪುತ್ರ. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ. ಈಗ ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು