3:15 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ, ಬಂಟ್ವಾಳ ಮೂಲದ ರಾಧೇಶ್ ಮಯ್ಯಗೆ ಫ್ರೆಶರ್ ಅವಾರ್ಡ್

01/05/2023, 00:40

ಬೆಂಗಳೂರು(reporterkarnataka.com): ಬೆಂಗಳೂರಿನ ಗ್ರೇಟ್ ಸಿಎಂಆರ್ ಯುನಿವರ್ಸಿಟಿ ಕಾಲೇಜಿನ ಎಂಬಿಎ ವಿದ್ಯಾರ್ಥಿ ರಾಧೇಶ್ ಮಯ್ಯ ಅವರು ಕಾಲೇಜಿನ ಫ್ರೆಶರ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಕಾಲೇಜಿನಲ್ಲಿ ಕಳೆದ ವಾರ ನಡೆದ 2023ನೇ ಸಾಲಿನ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ರಾಧೇಶ್ ಮಯ್ಯ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಬೆಂಗಳೂರಿನ 12 ಕಾಲೇಜುಗಳಿಂದ ರೇವಾ ವಿಶ್ವವಿದ್ಯಾಲಯದ ಕಾಲೇಜು ಭಾಗವಹಿಸುವವರಲ್ಲಿ 2ನೇ ಸ್ಥಾನವನ್ನು ಗೆದ್ದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ
ರಾಧೇಶ್ ಮಯ್ಯ ಅವರು ಮಾರ್ಕೆಟಿಂಗ್ ಪ್ರಮೋಶನ್ ಮಾಡುವ ಚಾಲೆಂಜ್ ನಲ್ಲಿ ಕೂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇದರಲ್ಲಿ 12 ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇದು ಎಂಬಿಎ ವಿದ್ಯಾರ್ಥಿ ಗಳಿಗೆ ಮೀಸಲಾದ ಚಾಲೆಂಜ್ ಆಗಿದೆ. ಇನ್ನು ಫ್ರೆಶರ್ ಅವಾರ್ಡ್ ಕಾಲೇಜಿನಲ್ಲಿ ಹಾಡುಗಾರಿಕೆ, ಕಲಿಕೆ ಇನ್ನಿತರ ಎಲ್ಲಾ ಚಟುವಟಿಕೆಗಳಲ್ಲಿ ಆಯ್ಕೆಯಾದ ಏಕೈಕ ವಿದ್ಯಾರ್ಥಿ ಗೆ ಮೀಸಲಾದ ಅವಾರ್ಡ್ ಆಗಿದೆ. ಅದು ಈ ಬಾರಿ ರಾಧೇಶ್ ಮಯ್ಯ ಅವರ ಪಾಲಾಗಿದೆ.
ರಾಧೇಶ್ ಮಯ್ಯ ಅವರು ನಿವೃತ್ತ ಕಂದಾಯ ಅಧಿಕಾರಿ ಹಾಗೂ ಸಂಗೀತ ವಿದ್ವಾಂಸ ಡಾ. ಎನ್. ಸೋಮಶೇಖರ್ ಮಯ್ಯ ಬಂಟ್ವಾಳ ಹಾಗೂ ಶಿಕ್ಷಕಿ ಶ್ರೀವಾಣಿ ಮಯ್ಯ ಅವರ ಪುತ್ರ. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಳೇ ವಿದ್ಯಾರ್ಥಿ. ಈಗ ಬೆಂಗಳೂರಿನ ಸಿಎಂಆರ್ ಯುನಿವರ್ಸಿಟಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು