11:41 AM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಬಾವಾ ಪರ ಸ್ವತಃ ದೇವೇಗೌಡರೇ ಫೀಲ್ಡಿಗೆ: ಇಂದು ಮಧ್ಯಾಹ್ನ ಮಾಜಿ ಪ್ರಧಾನಿ ಸುರತ್ಕಲ್ ಗೆ; ಜೆಡಿಎಸ್ ಪರ ಪ್ರಚಾರ

01/05/2023, 10:13

ಮಂಗಳೂರು(reporterkarnataka.com): ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನತಾ ದಳ ತೀರಾ ಬಡಕಲು ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಪ್ರಚಾರಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ಸರ್ವೋಚ್ಚ ನಾಯಕ ಎಚ್.ಡಿ. ದೇವೇಗೌಡ ಫೀಲ್ಡಿಗಿಳಿಯಲಿದ್ದಾರೆ.
ಮೊಯ್ದೀನ್ ಬಾವಾ ಅವರ ಸಹೋದರ,
ವಿಧಾನ ಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರು ದೇವೇಗೌಡ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಅನಾರೋಗ್ಯದ ನಡುವೆಯೂ ಉತ್ತರ ಕ್ಷೇತ್ರ ಸಂಚಾರಕ್ಕೆ ದೇವೇಗೌಡ ಅವರು ಒಪ್ಪಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಜೆಡಿಎಸ್ ಗೆ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರು ಇಲ್ಲದ ಕಾರಣ ಬಾವಾ ಪರ ಮತ ಕ್ರೋಢೀಕರಿಸಲು ದೇವೇಗೌಡ ಅವರೇ ಪ್ರಚಾರ ನಡೆಸಲಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಅವರು ಮೇ 1(ಇಂದು) ಮಧ್ಯಾಹ್ನ 2.00 ಗಂಟೆಗೆ ಕೃಷ್ಣಾಪುರದ ಫಿಝ ಗಾರ್ಡನ್ ಹೆಲಿಪಾಡ್ ಗೆ ಆಗಮಿಸುವರು. 2.30 ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ತಂಗುವರು. 3.30ಕ್ಕೆ ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು.
4,00 ಗಂಟೆಗೆ ಬಲವಂಡಿ ದೈವಸ್ಥಾನ, 4.30ಕ್ಕೆ ಗುರುಪುರ ಕಂಬಳ ದರ್ಗಾ ಭೇಟಿ ನೀಡುವರು.
5.00 ಗುರುಪುರ ಕೈಕಂಬದ ವಸ್ತು ಪ್ರದರ್ಶನ ಮೈದಾನದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು. ರಾತ್ರಿ 7.00 ನಿರ್ಗಮಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು