7:21 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ಅಧೀನ ಕಾಲೇಜುಗಳ ಪದವಿ ಪ್ರದಾನ

01/05/2023, 18:27

ಮಂಗಳೂರು(reporterkarnataka.com):
ನಗರದ ಫಳ್ನೀರ್ ನಲ್ಲಿರುವ ಇಂದಿರಾ ಎಜುಕೇಷನ್‌ ಟ್ರಸ್ಟ್ ಅಧೀನ ಕಾಲೇಜುಗಳ ಪದವಿ ಪ್ರದಾನ ಕಾರ್ಯಕ್ರಮ ನಗರದ ಮಿಲಾಗ್ರಿಸ್‌ ಜುಬಿಲಿ ಸಭಾಂಗಣದಲ್ಲಿ ಶನಿವಾರ ನಡಯಿತು.
ಮುಖ್ಯ ಅತಿಥಿಯಾಗಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಎನ್.ರಾಮಕೃಷ್ಣ ರೆಡ್ಡಿ, ಗೌರವ ಅತಿಥಿಯಾಗಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಪ್ರೊ.ಡಾ.ಯು.ಟಿ. ಇಫ್ತಿಕಾರ್ ಅಲಿ ಪಾಲ್ಗೊಂಡಿದ್ದರು.
ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಗ್ರೀಶಾ ಜೋಸ್; ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲೆ ಡಾ.ಎನ್. ಜಿಯೋವಿಯಾ ಜಾರ್ಜ್ (ಪಿಟಿ), ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ ಪ್ರಾಂಶುಪಾಲೆ ಕೃತಿಕಾ, ಅರೆ ವೈದ್ಯಕೀಯ ವಿಜ್ಞಾನಗಳ ಉಸ್ತುವಾರಿ ಪ್ರಾಂಶುಪಾಲೆ ಮೀಜಾ ಪಾಲ್ಗೊಂಡಿದ್ದರು.
ವಾರ್ಷಿಕ ವರದಿಯನ್ನು ಆಯಾಯ ಕಾಲೇಜುಗಳ ಪ್ರಾಂಶುಪಾಲರು ವಾಚನ ಮಾಡಿದರು. ಸಮಾರಂಭದ ಮುಖ್ಯ ಅತಿಥಿ ಡಾ.ಎನ್.ರಾಮಕೃಷ್ಣರೆಡ್ಡಿ ಅವರು, ಆರೋಗ್ಯ ವೃತ್ತಿಪರರ ಪ್ರಾಮುಖ್ಯತೆ ಮತ್ತು ವೃತ್ತಿಯ ಅಭಿವೃದ್ಧಿಗಾಗಿ ಡಾ.ಯು.ಟಿ.ಇಫ್ತಿಕರ್ ಅಲಿ ಅವರು ನೀಡಿದ ಅಗಾಧ ಕೊಡುಗೆ ಕುರಿತು ತಮ್ಮ ವಿಚಾರವನ್ನು ಹಂಚಿಕೊಂಡರು.
ಎಂಎಸ್ಸಿ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಅರೆ ವೈದ್ಯಕೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರಮಾಣ ಪತ್ರ ನೀಡಲಾಯಿತು.
ಇಂದಿರಾ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿ ಇವಾನ್ಸಾ ರಾಲಿನ್ ವಾರ್ಜ್ರಿ ಸ್ವಾಗತಿಸಿದರು. ಸಹ ಪ್ರಾಧ್ಯಾಪಕಿ ಸಿಜಿ ಆಗಸ್ಟಿನ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು