8:58 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ಸಿನಿಂದಾದ ಅನ್ಯಾಯ ಸರಿಪಡಿಸಲು ಬಾವಾಗೆ ಜೆಡಿಎಸ್ ಟಿಕೆಟ್: ಮಾಜಿ ಪ್ರಧಾನಿ ದೇವೇಗೌಡ

01/05/2023, 19:13

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕರಾಗಿದ್ದಾಗ 168 ಕೋಟಿ ರೂ. ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡದೆ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ಸರಿಪಡಿಸಲು ಜನತಾ ದಳ ಅವರಿಗೆ ಟಿಕೆಟ್ ನೀಡಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಮುಖ್ಯಸ್ಥ ಎಚ್.ಡಿ. ದೇವೇಗೌಡ ಹೇಳಿದರು.
ಸುರತ್ಕಲ್ ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಆಡಳಿತ ಕಾಲದಲ್ಲಿ ರೈತರ ಸಾಲ ಮನ್ನಾ ಮಾಡಲಾಯಿತು. ಮಹಿಳೆಯರು ನೆಮ್ಮದಿಯ ಬದುಕು ಕಂಡರು. ಮಂಗಳೂರು ಉತ್ತರ ಕ್ಷೇತ್ರ ಮೊಯ್ದೀನ್ ಬಾವಾ ಶಾಸಕರಾಗಿದ್ದ ಅವಧಿಯಲ್ಲಿ ಅಭಿವೃದ್ಧಿ ಕಂಡಿತು ಎಂದರು.


ಮಂಗಳೂರು ಉತ್ತರದಲ್ಲಿ ಬಾವಾ ಅವರಿಗೆ ಮೋಸದಿಂದ ಟಿಕೆಟ್ ತಪ್ಪಿಸಲಾಯಿತು. ಇದರ ಹಿಂದಿರುವ ವ್ಯಕ್ತಿಯ ಹೆಸರನ್ನು ನಾನು ಹೇಳುವುದಿಲ್ಲ. ಬಾವಾ ಅವರಿಗಾದ ಅನ್ಯಾಯ ಸರಿಪಡಿಸಲು ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗಿದೆ. ಮೇ 10 ಸಂಜೆ ವರೆಗೆ ನಿಮಗೆ ಅವಕಾಶವಿದೆ. ಬಾವಾ ಅವರನ್ನು ಗೆಲ್ಲಿಸಿ ಎಂದು ಕೈಜೋಡಿಸಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಬಿ. ಸದಾಶಿವ, ಮೂಡುಬಿದ್ರೆ ಅಭ್ಯರ್ಥಿ ಡಾ. ಅಮರಶ್ರೀ ಶೆಟ್ಟಿ, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು