1:52 PM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ಸಿನಿಂದಾದ ಅನ್ಯಾಯ ಸರಿಪಡಿಸಲು ಬಾವಾಗೆ ಜೆಡಿಎಸ್ ಟಿಕೆಟ್: ಮಾಜಿ ಪ್ರಧಾನಿ ದೇವೇಗೌಡ

01/05/2023, 19:13

ಮಂಗಳೂರು(reporterkarnataka.com): ಮಂಗಳೂರು ಉತ್ತರ ಶಾಸಕರಾಗಿದ್ದಾಗ 168 ಕೋಟಿ ರೂ. ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ ಮೊಯ್ದೀನ್ ಬಾವಾ ಅವರಿಗೆ ಟಿಕೆಟ್ ನೀಡದೆ ಕಾಂಗ್ರೆಸ್ ಮಾಡಿದ ಅನ್ಯಾಯವನ್ನು ಸರಿಪಡಿಸಲು ಜನತಾ ದಳ ಅವರಿಗೆ ಟಿಕೆಟ್ ನೀಡಿದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಮುಖ್ಯಸ್ಥ ಎಚ್.ಡಿ. ದೇವೇಗೌಡ ಹೇಳಿದರು.
ಸುರತ್ಕಲ್ ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಆಡಳಿತ ಕಾಲದಲ್ಲಿ ರೈತರ ಸಾಲ ಮನ್ನಾ ಮಾಡಲಾಯಿತು. ಮಹಿಳೆಯರು ನೆಮ್ಮದಿಯ ಬದುಕು ಕಂಡರು. ಮಂಗಳೂರು ಉತ್ತರ ಕ್ಷೇತ್ರ ಮೊಯ್ದೀನ್ ಬಾವಾ ಶಾಸಕರಾಗಿದ್ದ ಅವಧಿಯಲ್ಲಿ ಅಭಿವೃದ್ಧಿ ಕಂಡಿತು ಎಂದರು.


ಮಂಗಳೂರು ಉತ್ತರದಲ್ಲಿ ಬಾವಾ ಅವರಿಗೆ ಮೋಸದಿಂದ ಟಿಕೆಟ್ ತಪ್ಪಿಸಲಾಯಿತು. ಇದರ ಹಿಂದಿರುವ ವ್ಯಕ್ತಿಯ ಹೆಸರನ್ನು ನಾನು ಹೇಳುವುದಿಲ್ಲ. ಬಾವಾ ಅವರಿಗಾದ ಅನ್ಯಾಯ ಸರಿಪಡಿಸಲು ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗಿದೆ. ಮೇ 10 ಸಂಜೆ ವರೆಗೆ ನಿಮಗೆ ಅವಕಾಶವಿದೆ. ಬಾವಾ ಅವರನ್ನು ಗೆಲ್ಲಿಸಿ ಎಂದು ಕೈಜೋಡಿಸಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿ ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಬಿ. ಸದಾಶಿವ, ಮೂಡುಬಿದ್ರೆ ಅಭ್ಯರ್ಥಿ ಡಾ. ಅಮರಶ್ರೀ ಶೆಟ್ಟಿ, ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು