10:04 AM Friday3 - May 2024
ಬ್ರೇಕಿಂಗ್ ನ್ಯೂಸ್
ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಇತ್ತೀಚಿನ ಸುದ್ದಿ

ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಜನ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ: ಲಕ್ಷ್ಮಣ ರಾವ್ ಚಿಂಗಳೆ

16/07/2021, 07:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ದಿನನಿತ್ಯ ಡಿಸೇಲ್, ಪೆಟ್ರೋಲ್, ಅಡುಗೆ ಅನಿಲ ಬೆಲೆ ಏರುತ್ತಿದೆ. ಏಳು ವರ್ಷದ ಬಿಜೆಪಿ ಅವರ ಆಳ್ವಿಕೆಯಲ್ಲಿ ದಿನನಿತ್ಯ ಬಳಸುವ ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯಿಂದಾಗಿ ಬಡಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ಚಿಕ್ಕೋಡಿ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ ರಾವ್ ಚಿಂಗಳೆ ಆಕ್ರೋಶ ವ್ಯಕ್ತಪಡಿಸಿದರು.


ನಂತರ ಅಥಣಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಅಥಣಿ ತಾಲೂಕಿನಲ್ಲಿ ತೈಲ್ ಬೆಲೆ ಖಂಡಿಸಿ ಇದು 8ನೇ ಪ್ರತಿಭಟನೆಯಾಗಿದ್ದು, ಇಡೀ ವಿಶ್ವದ ವಿವಿಧ ದೇಶಗಳಲ್ಲಿ ತೈಲ ಬೆಲೆ 50 ರೂ ಆಸುಪಾಸಿನಲ್ಲಿದೆ. ಆದರೆ ನಮ್ಮಲ್ಲಿ ಮಾತ್ರ 100 ರೂಪಾಯಿ ಗಡಿ ದಾಟಿದ್ದು ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದರು. 

ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ  ಕೇವಲ 50 ಪೈಸೆ ಹೆಚ್ಚಾದರೆ ದೊಡ್ಡ ದೊಡ್ಡ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿಯ ಅನೇಕ ಮುಖಂಡರು, ಮಾಜಿ ಪ್ರಧಾನಿ ಮನಮೋಹನ ಸಿಂಗ ಅವರಿಗೆ ಬೆಲೆ ಇಳಿಸಿ ಎಂದು ಬಳೆಗಳನ್ನು ಕಳಿಹಿಸಿದ್ದರು‌, ಇದೀಗ ನಾವು ಕೂಡ ಮೋದಿಯವರಿಗೆ ಬಳೆಗಳನ್ನು ಕಳಿಸುತ್ತೇವೆ, ಈ ಸರ್ಕಾರದ ಆಳ್ವಿಕೆಯಲ್ಲಿ ಅಂಬಾನಿ ಅದಾನಿ ಅವರು ಮಾತ್ರ ಆರಾಮವಾಗಿದ್ದಾರೆ ಎಂದು ಕೇಂದ್ರ ಸರ್ಕಾರ ವಿರುದ್ಧ ಹರಿಹಾಯ್ದರು.


ಈ ಪ್ರತಿಭಟನೆ ಜಾಥಾದಲ್ಲಿ ಕಾಂಗ್ರೆಸ್ ಮುಖಂಡರಾದ ಧರೆಪ್ಪ ಠಕ್ಕಣ್ಣವರ, ಬಸವರಾಜ ಬುಟಾಳಿ, ಸುನೀಲ್ ಸಂಕ, ಅಸ್ಲಮ್ ನಾಲಬಂದ, ರಾವಸಾಬ ಐಹೊಳೆ, ಶಿವಾನಂದ ಗುಡ್ಡಾಪೂರ, ಬಸವರಾಜ ಗುಮಟಿ, ರಾಜು ಜಮಖಂಡಿಕರ, ಚಿಕ್ಕೋಡಿ ಜಿಲ್ಲಾ ಯುವ ಕಾಂಗ್ರೇಸ್ ಅಧ್ಯಕ್ಷ ಯಲ್ಲಪ್ಪ ಶಿಂಗೆ, ಗೌತಮ‌ ಪರಾಂಜಪೆ, ಶ್ರೀಶೈಲ ಮೇತ್ರಿ, ತೌಸಿಫ್ ಸಾಂಗಲೀಕರ, ಸಚಿನ ಬುಟಾಳಿ, ಪ್ರಮೋದ ಬಿಳ್ಳೂರ, ಗುಲಾಬ ನಾಲಬಂದ, ಬಾಬು ಖೆಮಲಾಪೂರೆ, ಅಕ್ಷಯ ಅಸ್ಕಿ, ಸಚಿನ ಬಡಕಂಬಿ, ಸಯ್ಯದ ಗಡ್ಡೇಕರ, ಉಮರ ಸಯ್ಯದ, ರವಿ ಬಡಕಂಬಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು