10:08 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಚುನಾವಣೆ: ಅಳಪೆ ಪ್ರದೇಶದಲ್ಲಿ ಮನೆ ಮನೆ ಬ್ಯಾಲೆಟ್ ಮತದಾನ: ಮೇ 6ಕ್ಕೆ ಕೊನೆ

02/05/2023, 14:07

ಮಂಗಳೂರು(reporterkarnataka.com): ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾದ ಮನೆಯಿಂದಲೇ ಮತದಾನ ಏಪ್ರಿಲ್ 29ರಂದು ಆರಂಭಗೊಂಡಿದ್ದು, ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶ ನೀಡಲಾಗಿದೆ. ಇಂದು ನಗರದ 50ನೇ ವಾರ್ಡ್ ನ ಅಳಪೆ ಪ್ರದೇಶದಲ್ಲಿ ಮನೆ ಮನೆ ಮತದಾನ ನಡೆಯಿತು.


ಮನೆಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷಚೇತನರು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮತದಾನ ಮಾಡುವ ವೇಳೆ ಅಧಿಕಾರಿಗಳು ವಿಡಿಯೋ ರೆಕಾರ್ಡಿಂಗ್​ ಮಾಡುತ್ತಾರೆ. ಮತದಾನದ ನಂತರ ಸ್ಟ್ರಾಂಗ್ ರೂಂಗೆ ಮತ ಪೆಟ್ಟಿಗೆಯನ್ನು ರವಾನಿಸಲಾಗುತ್ತದೆ. ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಹಾಗೂ ಪೊಲೀಸರಿಗೆ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಇವರು ಕೂಡ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಬಹುದು. ಈ ಎಲ್ಲ ಮತಗಳನ್ನೂ ಮೇ 13 ರಂದು ಮತ ಎಣಿಕೆ ದಿನ ತೆರೆಯಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು