8:53 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ವಿಧಾನ ಸಭೆ ಚುನಾವಣೆ: ಅಳಪೆ ಪ್ರದೇಶದಲ್ಲಿ ಮನೆ ಮನೆ ಬ್ಯಾಲೆಟ್ ಮತದಾನ: ಮೇ 6ಕ್ಕೆ ಕೊನೆ

02/05/2023, 14:07

ಮಂಗಳೂರು(reporterkarnataka.com): ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾದ ಮನೆಯಿಂದಲೇ ಮತದಾನ ಏಪ್ರಿಲ್ 29ರಂದು ಆರಂಭಗೊಂಡಿದ್ದು, ಮೇ 6 ರವರೆಗೆ ಬ್ಯಾಲೆಟ್ ಮತದಾನಕ್ಕೆ ಅವಕಾಶ ನೀಡಲಾಗಿದೆ. ಇಂದು ನಗರದ 50ನೇ ವಾರ್ಡ್ ನ ಅಳಪೆ ಪ್ರದೇಶದಲ್ಲಿ ಮನೆ ಮನೆ ಮತದಾನ ನಡೆಯಿತು.


ಮನೆಯಿಂದಲೇ ಮತದಾನ ಪ್ರಕ್ರಿಯೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ವಿಶೇಷಚೇತನರು ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮತದಾನ ಮಾಡುವ ವೇಳೆ ಅಧಿಕಾರಿಗಳು ವಿಡಿಯೋ ರೆಕಾರ್ಡಿಂಗ್​ ಮಾಡುತ್ತಾರೆ. ಮತದಾನದ ನಂತರ ಸ್ಟ್ರಾಂಗ್ ರೂಂಗೆ ಮತ ಪೆಟ್ಟಿಗೆಯನ್ನು ರವಾನಿಸಲಾಗುತ್ತದೆ. ಚುನಾವಣಾ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಹಾಗೂ ಪೊಲೀಸರಿಗೆ ಬ್ಯಾಲೆಟ್ ಮತದಾನದ ವ್ಯವಸ್ಥೆ ಮಾಡಲಾಗಿದ್ದು, ಇವರು ಕೂಡ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಬಹುದು. ಈ ಎಲ್ಲ ಮತಗಳನ್ನೂ ಮೇ 13 ರಂದು ಮತ ಎಣಿಕೆ ದಿನ ತೆರೆಯಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು