8:53 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಸುರತ್ಕಲ್: ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಪರ ರಾಜಸ್ಥಾನ ಮುಖ್ಯಮಂತ್ರಿ ಗೆಹ್ಲೋಟ್ ರೋಡ್ ಶೋ; ಭಾರಿ ಜನಸ್ತೋಮ

02/05/2023, 23:24

ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಅವರ ಪರವಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ಸುರತ್ಕಲ್ ನಲ್ಲಿ ಅಪಾರ ಜನಸ್ತೋಮದ ನಡುವೆ ರೋಡ್ ಶೋ ನಡೆಸಿದರು.
ಕಾನದಿಂದ ಆರಂಭಗೊಂಡ ರೋಡ್ ಶೋ ಸುರತ್ಕಲ್ ಜಂಕ್ಷನ್ ನಲ್ಲಿ ಸಮಾಪ್ತಿಗೊಂಡಿತು. ರೋಡ್ ಶೋನಲ್ಲಿ ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ಇನಾಯತ್ ಆಲಿ ಹಿತೈಷಿಗಳು ಪಾಲ್ಗೊಂಡಿದ್ದರು.


ಈ ಸಂದರ್ಭದಲ್ಲಿ ಮಾತನಾಡಿದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸವಿದೆ. ಎಲ್ಲರನ್ನು ಸಮಾನವಾಗಿ ಕಾಣುವ ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮಗಳ ನಡುವೆ ಕಂದಕ ಸೃಷ್ಟಿಸುವ ಕೆಲಸ ಮಾಡಿಲ್ಲ. ಎಲ್ಲರನ್ನು ಸಮಾನವಾಗಿ ಕಂಡಿದೆ. ಮತದಾರ ಬಾಂಧವರು ಜಾತಿ- ಮತದ ಬೇಧವಿಲ್ಲದೆ ಇನಾಯತ್ ಆಲಿ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಅವರು ಮಾತನಾಡಿ, ಆಸ್ಕರ್ ಫೆರ್ನಾಂಡಿಸ್ ಹಾಗೂ ಜನಾರ್ದನ ಪೂಜಾರಿ ಅವರು ನನ್ನ ರಾಜಕೀಯ ಗುರುಗಳು. ಬಿಜೆಪಿ ಜತೆಗೆ ಸೇರಿಕೊಂಡು ಕೆಲವರು ನನ್ನ ವಿರುದ್ಧ ಷಡ್ಯಂತರ ನಡೆಸುತ್ತಿದ್ದಾರೆ. ನನ್ನನ್ನು ಎದುರಿಸಲಾಗದ ಬಿಜೆಪಿ ಪಕ್ಷವು ಜೆಡಿಎಸ್ ಅಭ್ಯರ್ಥಿ ಯನ್ನು ನನ್ನ ಎದುರು ಬಿಟ್ಟಿದೆ ಎಂದರು.
ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಾಲ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ, ಮಾಜಿ ಮೇಯರ್ ಗಳಾದ ಕವಿತಾ ಸನಿಲ್, ಶಶಿಧರ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು