7:40 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಬಸ್ ಸಂಚಾರ ಮಾರ್ಗ ಬದಲಾವಣೆ: ಸಾರ್ವಜನಿಕರಿಂದ ದೂರು; ಶಾಸಕ ವೇದವ್ಯಾಸ ಕಾಮತ್ ಪರಿಶೀಲನೆ

16/07/2021, 07:56

ಮಂಗಳೂರು(reporterkarnataka news): ನಗರದಲ್ಲಿ ಬಸ್ ಸಂಚಾರಿ ಮಾರ್ಗ ಬದಲಾವಣೆಯ ಕುರಿತು ಸಾರ್ವಜನಿಕವಾಗಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಖಾಸಗಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಬಸ್ ಸಿಬ್ಬಂದಿಗಳಲ್ಲಿ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ‌ಶಾಸಕ ಕಾಮತ್, ಬಸ್ ಮಾಲಕರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳು ನಡೆಸಿದ ಸಭೆಯಲ್ಲಿ ಪಾಲ್ಗೊಂಡು ಮಾರ್ಗ ಬದಲಾವಣೆಯ ಕುರಿತು ಒಪ್ಪಿಗೆ ಸೂಚಿಸಿದ ಬಳಿಕವೇ ಬಸ್ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ವರೆಗೆ ಬಸ್ ಮಾಲಕರ ಸಂಘದ ಪ್ರಮುಖರು ಆಗುತ್ತಿರುವ ತೊಂದರೆಯ ಕುರಿತು ನನ್ನ ಬಳಿ ಚರ್ಚಿಸಿಲ್ಲ. ಆ ಬಳಿಕ ಸಾರ್ವಜನಿಕವಾಗಿ ಸಮಸ್ಯೆಯ ಕುರಿತು ಮಾಹಿತಿ ದೊರೆತ ಕೂಡಲೆ ಬಸ್ ಸಿಬ್ಬಂದಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದರು.

ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿ ನಡೆಸಿದ್ದೇನೆ. ಕೆಲವು ಕಡೆಗಳಲ್ಲಿ ರಸ್ತೆ ವಿಭಜಕಗಳನ್ನು ತೆರವುಗೊಳಿಸುವುದು ಸೇರಿದಂತೆ ಒಂದಷ್ಟು ಬದಲಾವಣೆ ಮಾಡಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗದಂತೆ ಸರಿಪಡಿಸಲು ತಿಳಿಸಿದ್ದೇನೆ. ಸಂಚಾರಿ ಪೋಲಿಸರೊಂದಿಗೂ ಕೂಡ‌ ಈ ವಿಚಾರದ ಕುರಿತು ಸಭೆ ನಡೆಸಲಾಗುವುದು ಎಂದು ಶಾಸಕ ಕಾಮತ್ ಹೇಳಿದರು.

ಈ ಸಂದರ್ಭದಲ್ಲಿ ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ,ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಮೇಯರ್ ಹಾಗೂ ಸ್ಥಳೀಯ ಮನಪಾ ಸದಸ್ಯರಾದ ದಿವಾಕರ್ ಪಾಂಡೇಶ್ವರ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ಮುತಾಲಿಬ್, ವಸಂತ್ ಜೆ ಪೂಜಾರಿ ಮುಂತಾದವರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು