8:52 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಶೆಟ್ಟರ್ ಕಚೇರಿಯಲ್ಲಿ ಈಗಲೂ ಇದೆ ಮೋದಿ, ಶಾ ಫೋಟೋ!: ಮುಂದಕ್ಕೂ ತೆಗಿಯೋಲ್ಲವಂತೆ!

04/05/2023, 11:16

ಮೈಥಿಲಿ ಎ. ಪಾಟೀಲ್ ಹುಬ್ಬಳ್ಳಿ

info.reporterkarnataka@gmail.com

ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರು ಬಿಜೆಪಿಯೊಂದಿಗಿನ 40 ವರ್ಷಗಳ ಕರುಳುಬಳ್ಳಿ ಸಂಬಂಧವನ್ನು ಕಡಿದು ಕಾಂಗ್ರೆಸ್ ಪಕ್ಷ ಸೇರಿರುವುದು ಈಗ ಹಳೆಯ ವಿಚಾರ. ಹೊಸ ವಿಚಾರವೇನೆಂದರೆ ಶೆಟ್ಟರ್ ಕಚೇರಿಯಲ್ಲಿ ಈಗಲೂ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಫೋಟೋ ರಾರಾಜಿಸುತ್ತಿದೆ.

ತಾನು ಕಾಂಗ್ರೆಸ್ ಸೇರಿದರೂ ಮೋದಿ ಹಾಗೂ ಶಾ ಅವರ ಫೋಟೋ ಮುಂದಕ್ಕೂ ಇರುತ್ತೆ. ನಾನು ಅದನ್ನು ಬದಲಾಯಿಸೊಲ್ಲ ಎಂದು ಶೆಟ್ಟರ್ ಅವರು ರಿಪೋರ್ಟರ್ ಕರ್ನಾಟಕಕ್ಕೆ ಖಡಾಖಂಡಿತವಾಗಿ ತಿಳಿಸಿದ್ದಾರೆ‌‌.
ಶೆಟ್ಟರ್ ಅವರಿಗೆ ಪ್ರಧಾನಿ ಮೋದಿ ಹಾಗೂ ಶಾ ಅವರ ಮೇಲೆ ಈಗಲೂ ಅಪಾರ ಗೌರವವಿದೆಯಂತೆ. ಪಕ್ಷ ಬದಲಾಯಿಸಿದ ಮಾತ್ರಕ್ಕೆ ಮೋದಿ ಮತ್ತು ಶಾ ಅವರ ಫೋಟೋ ಬದಲಾಯಿಸಬೇಕಿಲ್ಲ. ನಾನು ಅಧಿಕಾರದ ಆಸೆಯಿಂದ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿಲ್ಲ. ಸ್ವಾಭಿಮಾನದ ಪ್ರಶ್ನೆ ಎದುರಾದಾಗ ಆತ್ಮಾಭಿಮಾನ ಉಳಿಸಿಕೊಳ್ಳಲು ನಾನು ಪಕ್ಷ ಬದಲಾಯಿಸುವ ಅನಿವಾರ್ಯತೆ ಉಂಟಾಯಿತು ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು