1:51 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಅಮ್ತಿ ಹೊಳೆಕೂಡಿಗೆ ಮಲೆಕುಡಿಯ ಕುಟುಂಬ ಗಳಿಂದ ಚುನಾವಣೆ ಬಹಿಷ್ಕಾರ: ರಸ್ತೆ ಇಲ್ಲದೇ ಹಲವು ವರ್ಷಗಳಿಂದ ತೆಪ್ಪದಲ್ಲಿ ಸಂಚಾರ!

04/05/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಸೌಕರ್ಯ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಕೊಟ್ಟಿಗೆರೆ ಸಮೀಪದ ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಮುಖ್ಯಸ್ಥ ಸತೀಶ್, ಕೂವೆ ಸಮೀಪ ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು ಮನೆಗಳ ಸುತ್ತ ಭದ್ರಾನದಿ ಆವರಿಸಿರುವುದರಿಂದ ಮುಖ್ಯ ರಸ್ತೆಗೆ ಸಂಪರ್ಕ ಇಲ್ಲದಂತಾಗಿದೆ. ಮನೆ ಕಟ್ಟಲು ಮರಳು, ಇಟ್ಟಿಗೆ ಮುಂತಾದ ಕಚ್ಚಾವಸ್ತುಗಳನ್ನು ತೆಪ್ಪದಲ್ಲೆ ತರಬೇಕಾಗಿದೆ.


೨೦೧೫ ರಿಂದ ರಸ್ತೆಗಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ರಸ್ತೆ ಅಥವಾ ತೂಗು ಸೇತುವೆ ನಿರ್ಮಾಣವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮಕ್ಕೆ ಬಂದರೂ ಕೇವಲ ಭರವಸೆ ನೀಡಿ ಹೋಗುತ್ತಾರೆ. ಜನಪ್ರತಿನಿಧಿಗಳ, ಅಧಿಕಾರಿಗಳ ಭರವಸೆ ಕೇಳಿ ಸಾಕಾಗಿದೆ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು