10:17 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅಮ್ತಿ ಹೊಳೆಕೂಡಿಗೆ ಮಲೆಕುಡಿಯ ಕುಟುಂಬ ಗಳಿಂದ ಚುನಾವಣೆ ಬಹಿಷ್ಕಾರ: ರಸ್ತೆ ಇಲ್ಲದೇ ಹಲವು ವರ್ಷಗಳಿಂದ ತೆಪ್ಪದಲ್ಲಿ ಸಂಚಾರ!

04/05/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಸೌಕರ್ಯ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಕೊಟ್ಟಿಗೆರೆ ಸಮೀಪದ ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಮುಖ್ಯಸ್ಥ ಸತೀಶ್, ಕೂವೆ ಸಮೀಪ ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು ಮನೆಗಳ ಸುತ್ತ ಭದ್ರಾನದಿ ಆವರಿಸಿರುವುದರಿಂದ ಮುಖ್ಯ ರಸ್ತೆಗೆ ಸಂಪರ್ಕ ಇಲ್ಲದಂತಾಗಿದೆ. ಮನೆ ಕಟ್ಟಲು ಮರಳು, ಇಟ್ಟಿಗೆ ಮುಂತಾದ ಕಚ್ಚಾವಸ್ತುಗಳನ್ನು ತೆಪ್ಪದಲ್ಲೆ ತರಬೇಕಾಗಿದೆ.


೨೦೧೫ ರಿಂದ ರಸ್ತೆಗಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ರಸ್ತೆ ಅಥವಾ ತೂಗು ಸೇತುವೆ ನಿರ್ಮಾಣವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮಕ್ಕೆ ಬಂದರೂ ಕೇವಲ ಭರವಸೆ ನೀಡಿ ಹೋಗುತ್ತಾರೆ. ಜನಪ್ರತಿನಿಧಿಗಳ, ಅಧಿಕಾರಿಗಳ ಭರವಸೆ ಕೇಳಿ ಸಾಕಾಗಿದೆ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು