12:32 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಅಮ್ತಿ ಹೊಳೆಕೂಡಿಗೆ ಮಲೆಕುಡಿಯ ಕುಟುಂಬ ಗಳಿಂದ ಚುನಾವಣೆ ಬಹಿಷ್ಕಾರ: ರಸ್ತೆ ಇಲ್ಲದೇ ಹಲವು ವರ್ಷಗಳಿಂದ ತೆಪ್ಪದಲ್ಲಿ ಸಂಚಾರ!

04/05/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಸೌಕರ್ಯ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಕೊಟ್ಟಿಗೆರೆ ಸಮೀಪದ ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಮುಖ್ಯಸ್ಥ ಸತೀಶ್, ಕೂವೆ ಸಮೀಪ ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು ಮನೆಗಳ ಸುತ್ತ ಭದ್ರಾನದಿ ಆವರಿಸಿರುವುದರಿಂದ ಮುಖ್ಯ ರಸ್ತೆಗೆ ಸಂಪರ್ಕ ಇಲ್ಲದಂತಾಗಿದೆ. ಮನೆ ಕಟ್ಟಲು ಮರಳು, ಇಟ್ಟಿಗೆ ಮುಂತಾದ ಕಚ್ಚಾವಸ್ತುಗಳನ್ನು ತೆಪ್ಪದಲ್ಲೆ ತರಬೇಕಾಗಿದೆ.


೨೦೧೫ ರಿಂದ ರಸ್ತೆಗಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ರಸ್ತೆ ಅಥವಾ ತೂಗು ಸೇತುವೆ ನಿರ್ಮಾಣವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮಕ್ಕೆ ಬಂದರೂ ಕೇವಲ ಭರವಸೆ ನೀಡಿ ಹೋಗುತ್ತಾರೆ. ಜನಪ್ರತಿನಿಧಿಗಳ, ಅಧಿಕಾರಿಗಳ ಭರವಸೆ ಕೇಳಿ ಸಾಕಾಗಿದೆ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು