2:16 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಅಮ್ತಿ ಹೊಳೆಕೂಡಿಗೆ ಮಲೆಕುಡಿಯ ಕುಟುಂಬ ಗಳಿಂದ ಚುನಾವಣೆ ಬಹಿಷ್ಕಾರ: ರಸ್ತೆ ಇಲ್ಲದೇ ಹಲವು ವರ್ಷಗಳಿಂದ ತೆಪ್ಪದಲ್ಲಿ ಸಂಚಾರ!

04/05/2023, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ಸೌಕರ್ಯ ಕಲ್ಪಿಸದೇ ಇರುವುದರಿಂದ ಮುಂಬರುವ ಚುನಾವಣೆಯನ್ನು ಬಹಿಷ್ಕರಿಸಲು ಕೊಟ್ಟಿಗೆರೆ ಸಮೀಪದ ಅಮ್ತಿ ಹೊಳೆಕೂಡಿಗೆ ಗ್ರಾಮದ ಮಲೆಕುಡಿಯ ಕುಟುಂಬಗಳು ನಿರ್ಧರಿಸಿವೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮಲೆಕುಡಿಯ ಕುಟುಂಬದ ಮುಖ್ಯಸ್ಥ ಸತೀಶ್, ಕೂವೆ ಸಮೀಪ ಅಮ್ತಿ ಹೊಳೆಕೂಡಿಗೆಯಲ್ಲಿ ನಾಲ್ಕು ಮಲೆಕುಡಿಯ ಕುಟುಂಬಗಳು ವಾಸವಾಗಿದ್ದು ಮನೆಗಳ ಸುತ್ತ ಭದ್ರಾನದಿ ಆವರಿಸಿರುವುದರಿಂದ ಮುಖ್ಯ ರಸ್ತೆಗೆ ಸಂಪರ್ಕ ಇಲ್ಲದಂತಾಗಿದೆ. ಮನೆ ಕಟ್ಟಲು ಮರಳು, ಇಟ್ಟಿಗೆ ಮುಂತಾದ ಕಚ್ಚಾವಸ್ತುಗಳನ್ನು ತೆಪ್ಪದಲ್ಲೆ ತರಬೇಕಾಗಿದೆ.


೨೦೧೫ ರಿಂದ ರಸ್ತೆಗಾಗಿ ಹೋರಾಟ ಮಾಡಿಕೊಂಡು ಬಂದಿದ್ದರೂ ರಸ್ತೆ ಅಥವಾ ತೂಗು ಸೇತುವೆ ನಿರ್ಮಾಣವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಗ್ರಾಮಕ್ಕೆ ಬಂದರೂ ಕೇವಲ ಭರವಸೆ ನೀಡಿ ಹೋಗುತ್ತಾರೆ. ಜನಪ್ರತಿನಿಧಿಗಳ, ಅಧಿಕಾರಿಗಳ ಭರವಸೆ ಕೇಳಿ ಸಾಕಾಗಿದೆ. ಆದ್ದರಿಂದ ಈ ಬಾರಿಯ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು