2:27 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಆಮ್ ಆದ್ಮಿ ಪಾರ್ಟಿ: ರಾಜ್ಯದಲ್ಲಿ 107 ಮಂದಿ ಕೋಟ್ಯಧಿಪತಿಗಳು!: 48 ಮಂದಿ ಕ್ರಿಮಿನಲ್ ಪ್ರಕರಣವಿರುವ ಅಭ್ಯರ್ಥಿಗಳು ಸ್ಪರ್ಧೆ!

04/05/2023, 23:57

ಬೆಂಗಳೂರು(reporterkarnataka.com): ಬಡವರ, ಜನಸಾಮಾನ್ಯರ ಪಕ್ಷವೆಂದೇ ಬಿಂಬಿಸಿ ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 48 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಹಾಗೆ 107 ಮಂದಿ ಕೋಟ್ಯಧಿಪತಿಗಳು ವಿಜಯಕ್ಕಾಗಿ ಹೆಣಗಾಡುತ್ತಿದ್ದಾರೆ.

ಆಮ್ ಆದ್ಮಿ ಪಾರ್ಟಿಯಿಂದ ರಾಜ್ಯದಲ್ಲಿ ಒಟ್ಟು 208 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಇವರಲ್ಲಿ 107 ಮಂದಿ ಕೋಟ್ಯಧಿಪತಿಗಳು ಅಖಾಡಕ್ಕಿಳಿದಿದ್ದಾರೆ. ಹಾಗೆ ಬಿಜೆಪಿಯಿಂದ 216, ಕಾಂಗ್ರೆಸ್ ನಿಂದ 215, ಜನತಾ ದಳದಿಂದ 170 ಮಂದಿ ಕೋಟ್ಯಧಿಪತಿಗಳು ಕಣದಲ್ಲಿ ಸೆಣಸಾಡುತ್ತಿದ್ದಾರೆ. 60ಕ್ಕೂ ಹೆಚ್ಚು ಅಭ್ಯರ್ಥಿ ಗಳು 100 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ. ಒಟ್ಟಾರೆ ಪ್ರತಿ ಅಭ್ಯರ್ಥಿ ಯ ಸರಾಸರಿ ಆಸ್ತಿ 12.26 ಕೋಟಿ ರೂ. ಆಗಿರುತ್ತದೆ.
ರಾಜ್ಯ ವಿಧಾನಸಭೆ ಚುನಾವಣೆಯ ಅಂತಿಮ ಕಣದಲ್ಲಿರುವ 2613 ಮಂದಿ ಅಭ್ಯರ್ಥಿಗಳ ಪೈಕಿ 581 ಮಂದಿ ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇವರಲ್ಲಿ ಆಡಳಿತರೂಢ ಬಿಜೆಪಿ, ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ ಮತ್ತು ಜನತಾ ದಳದ ಅಭ್ಯರ್ಥಿಗಳು ಕೂಡ ಸೇರಿದ್ದಾರೆ.
ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ 581 ಆಭ್ಯರ್ಥಿಗಳಲ್ಲಿ 404 ಮಂದಿ ಅತ್ಯಾಚಾರ ಸೇರಿದಂತೆ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. 49 ಅಭ್ಯರ್ಥಿ ಗಳು ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣ ಎದುರಿಸುತ್ತಿದ್ದಾರೆ. ಬಿಜೆಪಿಯ 96 ಅಭ್ಯರ್ಥಿಗಳು, ಕಾಂಗ್ರೆಸ್ ನ 122 ಅಭ್ಯರ್ಥಿಗಳು, ಜನತಾ ದಳದ 70 ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ವಿಶೇಷವೆಂದರೆ ಜನಸಾಮಾನ್ಯರ ಪಕ್ಷ ಎಂದು ಕರೆಸಿಕೊಳ್ಳುವ ಆಮ್ ಆದ್ಮಿ ಪಾರ್ಟಿಯು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ 48 ಮಂದಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಈ ಮಾಹಿತಿಯನ್ನು ಬಹಿರಂಗಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು