4:07 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ತುಂಬೆ ವೆಂಟೆಂಡ್ ಡ್ಯಾಮ್ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತ: ಕಡಲನಗರಿಯಲ್ಲಿ ಜಲಕ್ಷಾಮ; ರೇಶನಿಂಗ್ ಜಾರಿ

05/05/2023, 14:49

ಮಂಗಳೂರು(reporterkarnataka.com):ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ತೀವ್ರ ಜಲಕ್ಷಾಮ ಎದುರಾಗಿದೆ. ಈ ನಡುವೆ ಮಂಗಳೂರಿನಲ್ಲಿ ರೇಶನಿಂಗ್ ಪದ್ಧತಿ ಜಾರಿಗೊಳಿಸಲಾಗಿದೆ.
ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ 4ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿರುತ್ತದೆ ಎಂದು ತಿಳಿಸಲಾಗಿದೆ.
ನೀರಿನ ಅಭಾವದ ಸಾಧಕ ಭಾದಕಗಳನ್ನು ಪರಿಶೀಲಿಸಿ ಜಿಲ್ಲಾಡಳಿತದ ಸಭೆಯಲ್ಲಿ ಈ ಕೆಳಗಿನಂತೆ ನಿರ್ಣಯಗಳನ್ನು ಕೈಗೊಳ್ಳಲಾಗಿರುತ್ತದೆ.
* ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ ಪ್ರದೇಶಕ್ಕೆ (ಮಂಗಳೂರು ನಗರ ಉತ್ತರ ಭಾಗಕ್ಕೆ) ಪರ್ಯಾಯ ದಿನಗಳಲ್ಲಿ (Alternative Days) ನೀರು ಬಿಡಲು ನಿರ್ಣಯಿಸಲಾಗಿದೆ.

* ಕಟ್ಟಡ ರಚನೆ, ಇತರ ನಿರ್ಮಾಣ ಕಾಮಗಾರಿಗಳು ಹಾಗೂ ವಾಹನ ತೊಳೆಯುವ ಸರ್ವಿಸ್ ಸೆಂಟರ್ ಗಳ ಜೋಡಣೆಯನ್ನು ಮುಂದಿನ ಸೂಚನೆಯವರೆಗೆ ಕಡಿತಗೊಳಿಸುವುದು. ಸಾರ್ವಜನಿಕರು ನೀರನ್ನು ಅನವಶ್ಯಕವಾಗಿ ಪೋಲು ಮಾಡುವುದು ಕಂಡು ಬಂದಲ್ಲಿ ಯಾವುದೇ ಸೂಚನೆ ನೀಡದೆ, ಜೋಡಣೆ ಕಡಿತಗೊಳಿಸುವುದು.

*ದಿನಾಂಕ 05.05.2023 ರಂದು ಮಂಗಳೂರು ನಗರ ಉತ್ತರಕ್ಕೆ, ದಿನಾಂಕ 06.05.2023 ರಂದು ಮಂಗಳೂರು ನಗರ ದಕ್ಷಿಣ, ನಂತರ ಕ್ರಮಾನುಗತವಾಗಿ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿರುತ್ತದೆ.
ಲಭ್ಯವಿರುವ ನೀರನ್ನು ಮೇಲೆ ತಿಳಿಸಿದಂತೆ ಪೂರೈಕೆ ಮಾಡುವುದು ಅನಿವಾರ್ಯವಾಗಿದ್ದು ಸಾರ್ವಜನಿಕರು ಮೇಲಿನ ವಿಷಯವನ್ನು ಮನಗಂಡು ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಪಾಲಿಕೆಯ ಕಾರ್ಯಪಾಲಕ ಎಂಜಿನಿಯರ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು