1:04 AM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ 7ರಂದು ಮುಲ್ಕಿಗೆ: ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ

05/05/2023, 23:41

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಪ್ರಚಾರಾರ್ಥವಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಮೇ 7ರಂದು ಮಧ್ಯಾಹ್ನ 1 ಗಂಟೆಗೆ ಮೂಲ್ಕಿ ಪ್ರದೇಶಕ್ಕೆ ಆಗಮಿಸಲಿದ್ದು, 50 ಸಾವಿರಕ್ಕಿಂತ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ.
ಈ ಸಂದರ್ಭದಲ್ಲಿ ಮಂಗಳೂರು ಉತ್ತರ, ದಕ್ಷಿಣ, ಮಂಗಳೂರು ಕೇಂದ್ರ ಹಾಗೂ ಕಾಪು ಕ್ಷೇತ್ರದಿಂದ ಜನ ಆಗಮಿಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಾಂಗ್ರೆಸ್ ಗೆ ರಾಜ್ಯದಲ್ಲಿ ಸ್ವತಂತ್ರ ಸರ್ಕಾರ ನಿರ್ಮಿಸುವ ಸಾಮರ್ಥ್ಯವಿದ್ದು, ಈ ರಾಜ್ಯಕ್ಕೆ ಡಬಲ್ ಇಂಜಿನ್ ಸರ್ಕಾರದ ಅವಶ್ಯಕತೆ ಇಲ್ಲ ಎಂದು ಡಾ.ಭಂಡಾರಿ ನುಡಿದರು.

ಡಬಲ್ ಇಂಜಿನ್ ಬಳಸುವುದು ಒಂದು ಕೆಟ್ಟುಹೋದಲ್ಲಿ ಮತ್ತೊಂದನ್ನು ಬಳಸಲು ಇಲ್ಲಿ ಅದರ ಅವಶ್ಯಕತೆ ಇಲ್ಲ. ನಾವು 2013ರಿಂದ 2018ರ ರವರೆಗೆ ಜಾರಿಗೊಳಿಸಿದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ನಂತರ ಬಿಜೆಪಿ ಸರ್ಕಾರ ಬಂದ ನಂತರ ನಮ್ಮ ಅನೇಕ ಕಾರ್ಯಕ್ರಮಗಳನ್ನು ನಿಲ್ಲಿಸಿದ್ದಾರೆ. ನಾವು ಮತ್ತೆ ಅಧಿಕಾರಕ್ಕೆ ಬಂದರೆ ನಿಲ್ಲಿಸಿದ ಎಲ್ಲಾ ಕಾರ್ಯಕ್ರಮಗಳನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.
ದೇಶಕ್ಕೆ ಕೀರ್ತಿ ತಂದುಕೊಟ್ಟ ಕ್ರೀಡಾಳುಗಳ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದು, ಅವರಿಗೆ ಗೌರವವಿಲ್ಲದಂತಾಗಿದೆ. ಅವರು ಪದಕ ಪಡೆದುಕೊಂಡು ಬಂದಾಗ ಔತಣಕೂಟಕ್ಕೆ ಹೋಗುವ ಮೋದಿ ಈಗ ಪ್ರತಿಭಟಿಸುವ ಸಂದರ್ಭದಲ್ಲಿ ಯಾಕೆ ಮಾತುಕತೆಗೆ ಹೋಗುತ್ತಿಲ್ಲ ಎಂದು ಮಂಜುನಾಥ್ ಭಂಡಾರಿ ಪ್ರಶ್ನಿಸಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಎಐಸಿಸಿ ವಕ್ತಾರ ಅಜಯ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ಪದ್ಮರಾಜ್ ,ಸತ್ರ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು