10:51 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಹರೇಕಳ ಸೇತುವೆ ಗೇಟ್ ತೆರೆದ ಪ್ರಕರಣ: ತಿಂಗಳ ಬಳಿಕ ಡಿವೈಎಫ್ ಐ ಕಾರ್ಯಕರ್ತರ ಮೇಲೆ ಎಫ್ ಐಆರ್

06/05/2023, 09:00

ಉಳ್ಳಾಲ(reporterkarnataka.com): ಉಳ್ಳಾಲ ತಾಲೂಕು ಹರೇಕಳ ಕಾಮಗಾರಿ ಮುಗಿದ ಸೇತುವೆಯ ಗೇಟ್ ತೆರೆದು ಸಂಚಾರಕ್ಕೆ ಅವಕಾಶ ಕಲ್ಪಿಸಿದ ಪ್ರಕರಣದಲ್ಲಿ ತಿಂಗಳ ತರುವಾಯ ಅಧಿಕಾರಿಗಳು ಕೊಣಾಜೆ ಠಾಣೆಯಲ್ಲಿ ಡಿವೈಎಫ್ಐ ಕಾರ್ಯಕರ್ತರ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.
ಗೇಟ್ ತೆರವುಗೊಳಿಸಿದ
ಸಂದರ್ಭ ಅಧಿಕಾರಿಗಳು ದೂರು ನೀಡಿದ್ದರೂ ಕಾನೂ‌ನು ಉಲ್ಲಂಘನೆಯ ಅಂಶಗಳು ಇಲ್ಲದ್ದರಿಂದ ಪೊಲೀಸರು ಎಫ್ ಐಆರ್ ಹಾಕದೆ ಹೇಳಿಕೆ ಪಡೆದು ಪ್ರಕರಣ ಮುಕ್ತಾಯಗೊಳಿಸಿದ್ದರು. ಇದೀಗ ಘಟನೆ ನಡೆದು ತಿಂಗಳ ತರುವಾಯ ಹೊಸದಾಗಿ ಎಫ್ ಐಆರ್ ಹಾಕಲಾಗಿದೆ.
ಸಿಪಿಐಎಂ, ಡಿವೈಎಫ್ಐ ಕಾರ್ಯಕರ್ತರು ಜಿಲ್ಲೆಯಾದ್ಯಂತ ಬಿಜೆಪಿ ಸೋಲಿಸಲು ಪೂರ್ಣಪ್ರಮಾಣದಲ್ಲಿ ಓಡಾಡುತ್ತಿದ್ದಾರೆ. ಜಾತ್ಯಾತೀತ ಅಭ್ಯರ್ಥಿಗಳ ಪರವಾಗಿ ಪರಿಣಾಮಕಾರಿ ಪ್ರಚಾರ ನಡೆಸುತ್ತಿದ್ದಾರೆ. ಇದು ಬಿಜೆಪಿ ನಾಯಕರ ಕಣ್ಣು ಕೆಂಪಗಾಗಿಸಿದೆ.‌ಉಳ್ಳಾಲದಲ್ಲಿಯೂ ಸಿಪಿಎಂ, ಡಿವೈಎಫ್ಐ ಚುನಾವಣಾ ತಂತ್ರಗಳು ಬಿಜೆಪಿ ಲೆಕ್ಕಾಚಾರವನ್ನು ಉಲ್ಟಾ ಹೊಡೆಸುತ್ತಿದೆ. ಅದರ ಪರಿಣಾಮ ಡಿವೈಎಫ್ಐ ಕಾರ್ಯಕರ್ತರ ಮೇಲೆ ಸುಳ್ಳು ಎಫ್ ಐಆರ್ ದಾಖಲಿಸಿ ಅಧಿಕಾರಿಗಳು ಬಿಜೆಪಿ ನಾಯಕರ ಮಾತಿಗೆ ಇ‌ನ್ಜೂ ಕಿವಿಗೊಡುತ್ತಿರುವುದು ಅಚ್ಚರಿಯ ಸಂಗತಿ ಎಂದು ಡಿವೈಎಫ್ ಐ ನಾಯಕ ಮುನೀರ್ ಕಾಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು