3:41 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕರಾವಳಿಯ ಬ್ಯಾಂಕ್ ಗಳ ವಿಲೀನ ಮಾಡಿ ಪ್ರಧಾನಿ ಜನತೆಗೆ ದ್ರೋಹ ಎಸಗಿದ್ದಾರೆ: ಮುಲ್ಕಿಯಲ್ಲಿ ಪ್ರಿಯಾಂಕಾ ಗಾಂಧಿ ಕಿಡಿ

07/05/2023, 18:04

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆ ಚಕಾರವೆತ್ತದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಯಲ್ಲಿ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಕರಾವಳಿಯ ಬ್ಯಾಂಕ್ ಗಳನ್ನು ವಿಲೀನ ಮಾಡುವ ಮೂಲಕ ಜನತೆಗೆ ದ್ರೋಹ ಎಸಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.
ನಗರದ ಹೊರವಲಯದ ಮೂಲ್ಕಿಯ ಕೊಳ್ನಾಡಿನಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಆತಂಕ ಇರುವುದು ಜನವಿರೋಧಿ ಸರ್ಕಾರದ ಹಗರಣಗಳ ಬಗ್ಗೆ, ಭ್ರಷ್ಟಾಚಾರ ಬಗ್ಗೆ. ಆದರೆ ಇದು ಯಾವುದರ ಬಗ್ಗೆ ಮಾತನಾಡದ ನೀವು ಜನರ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಿರಿ ಎಂದು ಕಿಡಿಕಾರಿದರು.


ಬೆಲೆಯೇರಿಕೆ ಉರಿಯಲ್ಲಿ ಜನರು ಬೆಂದು ಹೋಗಿದ್ದಾರೆ. ಇದರ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ಅವರು ಚುನಾವಣೆ ವೇಳೆ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ ಎಂದು ಪ್ರಿಯಾಂಕಾ ಲೇವಡಿ ಮಾಡಿದರು.
ಬಿಜೆಪಿ ಡಬಲ್ ಎಂಜಿನ್ ಸರ್ಕಾರದಿಂದ ಜನರು ಸಂಪೂರ್ಣ ನೆಮ್ಮದಿ ಕಳೆದುಕೊಂಡಿದ್ದಾರೆ. ಅಭಿವೃದ್ಧಿ ಬಗ್ಗೆ ನೀವು ಮಾತನಾಡುವುದೇ ಇಲ್ಲ. ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಜಿಲ್ಲೆಯಲ್ಲಿನ ಬ್ಯಾಂಕ್ ಗಳನ್ನು ವಿಲೀನ ಮಾಡುವ ಮೂಲಕ ಇಲ್ಲಿನ ಜನರಿಗೆ ದ್ರೋಹ ಮಾಡಿದ್ದೀರಿ. ಈ ಬಾರಿ ಕರ್ನಾಟಕದ ಜನರು ಕಾಂಗ್ರೆಸ್ ಸರಕಾರ ತರುವುದಕ್ಕೆ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಸರಕಾರದ ಅಧಿಕಾರದ ಅವಧಿಯಲ್ಲಿ ರಾಜೀವ್ ಗಾಂಧಿ ಅವರ ದೂರದರ್ಶಿತ್ವದಿಂದಾಗಿ ರಾಜ್ಯವು ಇಂದು ಐಟಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದರು.


ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ್ ಬೆಲೆಗಳು ಏರಿಕೆ ಆಗಿವೆ. ಶಿಕ್ಷಣ, ಉದ್ಯೋಗಕ್ಕೆ ಡಬಲ್ ಎಂಜಿನ್ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಗಳು ಬದಲಾವಣೆ ಆಗುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಕೋಟಿ ಕೋಟಿ ಮಾರಾಟ ಆಗುತ್ತಿದೆ. ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳನ್ನು ಸಂಪೂರ್ಣ ಈಡೇರಿಸಲಿದೆ. ರಾಜ್ಯದಲ್ಲಿ ಖಾಲಿ ಹುದ್ದೆಗಳನ್ನು ಒಂದೇ ವರ್ಷದಲ್ಲಿ ಭರ್ತಿ ಮಾಡುತ್ತೇವೆ. ಮೀನುಗಾರರಿಗೆ ಡಿಸೇಲ್ ಸಹಾಯಧನ, ನಾರಾಯಣ ಗುರು ನಿಗಮಕ್ಕೆ ಅನುದಾನ, ಐಟಿ, ಗಾರ್ಮೆಂಟ್ ಕ್ಷೇತ್ರಗಳ ಸ್ಥಾಪನೆಗೆ ಕಾಂಗ್ರೆಸ್ ಸರ್ಕಾರವು ಒತ್ತು ನೀಡಲಿದೆ ಎಂದರು.



ಕರಾವಳಿಗೆ ಮೊದಲ ಬಾರಿ ಆಗಮಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತುಳುನಾಡಿನ ಸಮಸ್ತ ಜನತೆಗೆ ನಮಸ್ಕಾರಗಳು ಎಂದು ಮಾತು ಆರಂಭಿಸಿದರು. ಕರಾವಳಿ ದೈವದ ನಾಡು, ಬಪ್ಪನಾಡು ಕ್ಷೇತ್ರ, ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಾನವು ಸಂಪತ್ತು, ಶಾಂತಿಯ ತಾಣ ಎಂದು ಬಣ್ಣಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಮಿಥುನ್ ರೈ, ಇನಾಯತ್ ಅಲಿ, ಮಾಜಿ ಸಚಿವ ಜನಾರ್ದನ ಪೂಜಾರಿ, ಅಜಯ್ ಕುಮಾರ್, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ,
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು