7:02 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಕರಾವಳಿಯ ಬ್ಯಾಂಕ್ ಗಳ ವಿಲೀನ ಮಾಡಿ ಪ್ರಧಾನಿ ಜನತೆಗೆ ದ್ರೋಹ ಎಸಗಿದ್ದಾರೆ: ಮುಲ್ಕಿಯಲ್ಲಿ ಪ್ರಿಯಾಂಕಾ ಗಾಂಧಿ ಕಿಡಿ

07/05/2023, 18:04

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ರಾಜ್ಯ ಸರಕಾರದ ಭ್ರಷ್ಟಾಚಾರದ ಬಗ್ಗೆ ಚಕಾರವೆತ್ತದ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಯಲ್ಲಿ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ಕರಾವಳಿಯ ಬ್ಯಾಂಕ್ ಗಳನ್ನು ವಿಲೀನ ಮಾಡುವ ಮೂಲಕ ಜನತೆಗೆ ದ್ರೋಹ ಎಸಗಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.
ನಗರದ ಹೊರವಲಯದ ಮೂಲ್ಕಿಯ ಕೊಳ್ನಾಡಿನಲ್ಲಿ ಭಾನುವಾರ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ ಆತಂಕ ಇರುವುದು ಜನವಿರೋಧಿ ಸರ್ಕಾರದ ಹಗರಣಗಳ ಬಗ್ಗೆ, ಭ್ರಷ್ಟಾಚಾರ ಬಗ್ಗೆ. ಆದರೆ ಇದು ಯಾವುದರ ಬಗ್ಗೆ ಮಾತನಾಡದ ನೀವು ಜನರ ಮತ ಕೇಳುವ ನೈತಿಕ ಹಕ್ಕು ಕಳೆದುಕೊಂಡಿದ್ದಿರಿ ಎಂದು ಕಿಡಿಕಾರಿದರು.


ಬೆಲೆಯೇರಿಕೆ ಉರಿಯಲ್ಲಿ ಜನರು ಬೆಂದು ಹೋಗಿದ್ದಾರೆ. ಇದರ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ಅವರು ಚುನಾವಣೆ ವೇಳೆ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ ಎಂದು ಪ್ರಿಯಾಂಕಾ ಲೇವಡಿ ಮಾಡಿದರು.
ಬಿಜೆಪಿ ಡಬಲ್ ಎಂಜಿನ್ ಸರ್ಕಾರದಿಂದ ಜನರು ಸಂಪೂರ್ಣ ನೆಮ್ಮದಿ ಕಳೆದುಕೊಂಡಿದ್ದಾರೆ. ಅಭಿವೃದ್ಧಿ ಬಗ್ಗೆ ನೀವು ಮಾತನಾಡುವುದೇ ಇಲ್ಲ. ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಜಿಲ್ಲೆಯಲ್ಲಿನ ಬ್ಯಾಂಕ್ ಗಳನ್ನು ವಿಲೀನ ಮಾಡುವ ಮೂಲಕ ಇಲ್ಲಿನ ಜನರಿಗೆ ದ್ರೋಹ ಮಾಡಿದ್ದೀರಿ. ಈ ಬಾರಿ ಕರ್ನಾಟಕದ ಜನರು ಕಾಂಗ್ರೆಸ್ ಸರಕಾರ ತರುವುದಕ್ಕೆ ನಿರ್ಧಾರ ಮಾಡಿದ್ದಾರೆ. ಕಾಂಗ್ರೆಸ್ ಸರಕಾರದ ಅಧಿಕಾರದ ಅವಧಿಯಲ್ಲಿ ರಾಜೀವ್ ಗಾಂಧಿ ಅವರ ದೂರದರ್ಶಿತ್ವದಿಂದಾಗಿ ರಾಜ್ಯವು ಇಂದು ಐಟಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದರು.


ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ್ ಬೆಲೆಗಳು ಏರಿಕೆ ಆಗಿವೆ. ಶಿಕ್ಷಣ, ಉದ್ಯೋಗಕ್ಕೆ ಡಬಲ್ ಎಂಜಿನ್ ಸರ್ಕಾರದ ಕೊಡುಗೆ ಶೂನ್ಯವಾಗಿದೆ. ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿಗಳು ಬದಲಾವಣೆ ಆಗುತ್ತಿದ್ದಾರೆ. ಮುಖ್ಯಮಂತ್ರಿ ಹುದ್ದೆ ಕೋಟಿ ಕೋಟಿ ಮಾರಾಟ ಆಗುತ್ತಿದೆ. ಕಾಂಗ್ರೆಸ್ ಘೋಷಣೆ ಮಾಡಿರುವ ಗ್ಯಾರಂಟಿಗಳನ್ನು ಸಂಪೂರ್ಣ ಈಡೇರಿಸಲಿದೆ. ರಾಜ್ಯದಲ್ಲಿ ಖಾಲಿ ಹುದ್ದೆಗಳನ್ನು ಒಂದೇ ವರ್ಷದಲ್ಲಿ ಭರ್ತಿ ಮಾಡುತ್ತೇವೆ. ಮೀನುಗಾರರಿಗೆ ಡಿಸೇಲ್ ಸಹಾಯಧನ, ನಾರಾಯಣ ಗುರು ನಿಗಮಕ್ಕೆ ಅನುದಾನ, ಐಟಿ, ಗಾರ್ಮೆಂಟ್ ಕ್ಷೇತ್ರಗಳ ಸ್ಥಾಪನೆಗೆ ಕಾಂಗ್ರೆಸ್ ಸರ್ಕಾರವು ಒತ್ತು ನೀಡಲಿದೆ ಎಂದರು.



ಕರಾವಳಿಗೆ ಮೊದಲ ಬಾರಿ ಆಗಮಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತುಳುನಾಡಿನ ಸಮಸ್ತ ಜನತೆಗೆ ನಮಸ್ಕಾರಗಳು ಎಂದು ಮಾತು ಆರಂಭಿಸಿದರು. ಕರಾವಳಿ ದೈವದ ನಾಡು, ಬಪ್ಪನಾಡು ಕ್ಷೇತ್ರ, ಕಟೀಲು ದುರ್ಗಾಪರಮೇಶ್ವರಿಯ ಸನ್ನಿಧಾನವು ಸಂಪತ್ತು, ಶಾಂತಿಯ ತಾಣ ಎಂದು ಬಣ್ಣಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿಗಳಾದ ಮಿಥುನ್ ರೈ, ಇನಾಯತ್ ಅಲಿ, ಮಾಜಿ ಸಚಿವ ಜನಾರ್ದನ ಪೂಜಾರಿ, ಅಜಯ್ ಕುಮಾರ್, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ,
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು