2:25 AM Wednesday2 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ: ಶಶಿಕಾಂತ ಪಡಸಲಗಿ ಖಡಕ್ ಎಚ್ಚರಿಕೆ

16/07/2021, 18:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ರೈತರಿಗೆ ಕಿರುಕುಳ ನೀಡುತ್ತಿರುವುದು ಕಂಡು ಬಂದರೆ ಅಂತಹುಗಳಿಗೆ ಬೀಗ ಜಡಿಯಲಾಗುವುದು.ರೈತರಿಗೆ ಸಕ್ಕರೆ ಕಾರ್ಖಾನೆಗಳು ಇನ್ನೂವರೆಗೂ ಬಿಲ್ ನೀಡಿಲ್ಲ.ಅಂತಹ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ ರೈತರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಸರಿಯಾಗಿ ರಸ ಗೊಬ್ಬರಗಳು, ಬಿತ್ತನೆಯ ಬೀಜಗಳು ದೊರೆಯುತ್ತಿಲ್ಲ. ರಸ ಗೊಬ್ಬರಗಳನ್ನು ಎಂಆರಪಿ ದರಕ್ಕಿಂತ ಹೆಚ್ಚಿಗೆ ನೀಡುವುದು ಕಂಡು ಬಂದಿದೆ. ಸಂಬರಗಿ ಗ್ರಾಮದಲ್ಲಿ ಪ್ರಿಯ ವೈನ್ಸ್ ತೆರವು ಮಾಡಲು ರೈತ ಮುಖಂಡರು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಗ್ರಾಮಸ್ಥರು ಸೇರಿ ಸುಮಾರು 1 ತಿಂಗಳಿಂದ ಶ್ರಮ ಪಟ್ಟು ಬೇಕಾದ ದಾಖಲಾತಿಗಳನ್ನು ಸಂಬಂಧ ಪಟ್ಟ ಅಧಿಖಾರಿಗಳಿಗೆ ಕೊಟ್ಟಿದ್ದು ಕೂಡಲೇ ವೈನ್ಸ್ ಶಾಪ್ ನ್ನ್ ತೆರವು ಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿರುವ ಎಲ್ಲ ರೈತರು ಸೇರಿ ಹೋರಾಟಕ್ಕೆ ಇಳಿವುದಾಗಿ ಎಚ್ಚರಿಕೆ ಕೊಟ್ಟರು.

ರೈತರು ಯಾವುದೇ ಜಾತಿ, ಭಾಷೆ, ಧರ್ಮ, ಶ್ರೀಮಂತ-ಬಡವ ಎಂಬ ಬೇಧ ಮಾಡದೇ ಒಗ್ಗಟ್ಟಾಗಿರಲು ಅವರು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು