4:26 PM Friday3 - May 2024
ಬ್ರೇಕಿಂಗ್ ನ್ಯೂಸ್
ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:…

ಇತ್ತೀಚಿನ ಸುದ್ದಿ

ಕಬ್ಬಿನ ಬಿಲ್ ಪಾವತಿಸದ ಸಕ್ಕರೆ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ: ಶಶಿಕಾಂತ ಪಡಸಲಗಿ ಖಡಕ್ ಎಚ್ಚರಿಕೆ

16/07/2021, 18:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳು ರೈತರಿಗೆ ಕಿರುಕುಳ ನೀಡುತ್ತಿರುವುದು ಕಂಡು ಬಂದರೆ ಅಂತಹುಗಳಿಗೆ ಬೀಗ ಜಡಿಯಲಾಗುವುದು.ರೈತರಿಗೆ ಸಕ್ಕರೆ ಕಾರ್ಖಾನೆಗಳು ಇನ್ನೂವರೆಗೂ ಬಿಲ್ ನೀಡಿಲ್ಲ.ಅಂತಹ ಕಾರ್ಖಾನೆಗಳಿಗೆ ಶೀಘ್ರದಲ್ಲೇ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಪಡಸಲಗಿ ಎಚ್ಚರಿಕೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ ರೈತರ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ಸರಿಯಾಗಿ ರಸ ಗೊಬ್ಬರಗಳು, ಬಿತ್ತನೆಯ ಬೀಜಗಳು ದೊರೆಯುತ್ತಿಲ್ಲ. ರಸ ಗೊಬ್ಬರಗಳನ್ನು ಎಂಆರಪಿ ದರಕ್ಕಿಂತ ಹೆಚ್ಚಿಗೆ ನೀಡುವುದು ಕಂಡು ಬಂದಿದೆ. ಸಂಬರಗಿ ಗ್ರಾಮದಲ್ಲಿ ಪ್ರಿಯ ವೈನ್ಸ್ ತೆರವು ಮಾಡಲು ರೈತ ಮುಖಂಡರು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಗ್ರಾಮಸ್ಥರು ಸೇರಿ ಸುಮಾರು 1 ತಿಂಗಳಿಂದ ಶ್ರಮ ಪಟ್ಟು ಬೇಕಾದ ದಾಖಲಾತಿಗಳನ್ನು ಸಂಬಂಧ ಪಟ್ಟ ಅಧಿಖಾರಿಗಳಿಗೆ ಕೊಟ್ಟಿದ್ದು ಕೂಡಲೇ ವೈನ್ಸ್ ಶಾಪ್ ನ್ನ್ ತೆರವು ಗೊಳಿಸಬೇಕು. ಇಲ್ಲವಾದಲ್ಲಿ ರಾಜ್ಯದಲ್ಲಿರುವ ಎಲ್ಲ ರೈತರು ಸೇರಿ ಹೋರಾಟಕ್ಕೆ ಇಳಿವುದಾಗಿ ಎಚ್ಚರಿಕೆ ಕೊಟ್ಟರು.

ರೈತರು ಯಾವುದೇ ಜಾತಿ, ಭಾಷೆ, ಧರ್ಮ, ಶ್ರೀಮಂತ-ಬಡವ ಎಂಬ ಬೇಧ ಮಾಡದೇ ಒಗ್ಗಟ್ಟಾಗಿರಲು ಅವರು ಕರೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು