7:41 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬಿಜೆಪಿ ಮುಖಂಡ ಸತೀಶ್ ಪ್ರಭು ಸಹಿತ 4 ಮಂದಿ ಕಾಂಗ್ರೆಸ್ ಸೇರ್ಪಡೆ: ಪಕ್ಷದ ಧ್ವಜ ಕೊಟ್ಟು ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

07/05/2023, 22:23

ಮಂಗಳೂರು(reporter Karnataka.com): ಬಿಜೆಪಿ ಮುಖಂಡ ಸತೀಶ್ ಪ್ರಭು ಸೇರಿದಂತೆ ನಾಲ್ವರು ಭಾನುವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ಸಂದರ್ಭ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಹಾಗೂ ನಾನಾ ಸಂಘಟನೆಯಲ್ಲಿ ಸುಮಾರು 3 ದಶಕಗಳ ಕಾಲ ಸೇವೆ ಮಾಡಿದ ಪ್ರಮುಖ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಬಿಜೆಪಿಯಲ್ಲಿ ಪಕ್ಷಾಂತರ ಸುನಾಮಿ ಆರಂಭವಾಗಿದ್ದು, ಈವರೆಗೆ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಸೇರಿದಂತೆ 47 ಮಂದಿ ಹಿರಿಯ ನಾಯಕರು ಹಾಗೂ 6 ಮಂದಿ ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಪಕ್ಷ ಸೇರ್ಪಡೆ ಮಾಡಿದ್ದಾರೆ. ಇದರಿಂದ ಬಿಜೆಪಿ ಮುಳುಗುತ್ತಿರುವ ಹಡಗಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಈ ರಾಜ್ಯದಲ್ಲಿ ಆಡಳಿತ ನಡೆಸಲಿದೆ ಎಂದರು.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ರಥಬೀದಿ ವೆಂಕಟರಮಣ ದೇವಳದ ಟ್ರಸ್ಟಿ ಹಾಗೂ ಬಿಜೆಪಿ ಮುಖಂಡ ಸತೀಶ್ ಪ್ರಭು ಅವರು 30 ವರ್ಷಗಳಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಿಜೆಪಿ ಯುವಮೋರ್ಚಾ, ದ.ಕ. ಜಿಲ್ಲಾ ಬಿಜೆಪಿಯಲ್ಲಿ ಜವಾಬ್ದಾರಿ ವಹಿಸಿಕೊಂಡವರು. ಇಂತಹ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಹೆಮ್ಮೆಯೆನಿಸುತ್ತಿದೆ. ಇವರ ಜತೆ ಸಂತೋಷ್ ಶೆಟ್ಟಿ, ರಾಜೇಶ್ ಕಾಮತ್, ರಜತಾ ಆರ್. ಕಾಮತ್ ಹಾಗೂ ದೀಕ್ಷಾ ಕಾಮತ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.
ಜನಹಿತ ಸಾಧನೆಗೆ ಕಾಂಗ್ರೆಸ್ ಸೇರ್ಪಡೆ: ನಾನು ಸುಮಾರು ವರ್ಷಗಳಿಂದ ಸಂಘಪರಿವಾರ, ಬಿಜೆಪಿ ಜತೆ ಗುರುತಿಸಿಕೊಂಡಿದ್ದು, ನಾನಾ ಜವಬ್ದಾರಿ ವಹಿಸಿಕೊಂಡಿದ್ದೆ. ಆದರೆ ಬಿಜೆಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಜನಹಿತ ಸಾಧನೆ ಗೌಣವಾಗುತ್ತಿದ್ದು, ಇದರಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಸತೀಶ್ ಪ್ರಭು ಹೇಳಿದರು.
ನಾನು ಯಾವುದೇ ಅಧಿಕಾರ, ಹುದ್ದೆಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಈ ಜಿಲ್ಲೆಯಲ್ಲಿ ನಮ್ಮ ಹಿರಿಯರು ಕಾಂಗ್ರೆಸ್‌ನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದು, ಆ ನಿಟ್ಟಿನಲ್ಲಿ ಗತವೈಭವ ಮರಳಿ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕಾಂಗ್ರೆಸ್ ಮುಖಂಡರಾದ ಪಿ.ವಿ. ಮೋಹನ್, ಲಾವಣ್ಯ ಬಲ್ಲಾಳ್, ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ಪ್ರಕಾಶ್ ಸಾಲ್ಯಾನ್, ನವೀನ್ ಡಿಸೋಜ, ದ.ಕ. ಯುವಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ತೇಜಸ್ವಿರಾಜ್, ಡೆನ್ನಿಸ್ ಡಿಸಿಲ್ವಾ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು